ಧಾರವಾಡ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ಸರ್ಕಾರದ ನಿರ್ಧಾರ ಸರಿಯಾಗಿದೆ. ಈ ಕೇಸ್ನ್ನು ವಾಪಸ್ ಪಡೆದಿದ್ದು ನಮ್ಮ ಸರ್ಕಾರ. ನಮ್ಮ ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ ಎಂದು ನಾವು ಹೇಳಬೇಕು. ಬಿಜೆಪಿಯವರು ಬೇಕಾದರೆ ಪ್ರತಿಭಟನೆ ಮಾಡಿಕೊಳ್ಳಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಸ್ ವಾಪಸ್ ಪಡೆದಿರುವುದಕ್ಕೆ ಬಿಜೆಪಿಯವರು ಪ್ರತಿಭಟನೆ ಮಾಡಲಿ ಬೇಡ ಎಂದವರಾರು? ವಕೀಲರು ಕೋರ್ಟ್ಗೆ ಹೋಗಲಿ. ಕೋರ್ಟ್ ಇರುವುದೇ ವಿಚಾರಣೆ ಮಾಡುವುದಕ್ಕೆ ಎಂದರು. ಮುಡಾ ವಿಚಾರವಾಗಿ ಬಿಜೆಪಿಯವರು ಪಾದಯಾತ್ರೆ ಮಾಡಿದರು. ಇದೇ ಬಿಜೆಪಿಯವರ ಮೇಲೆ ಎಷ್ಟು ಎಫ್ಐಆರ್ ಆಗಿದೆ ನೋಡಿಕೊಳ್ಳಲಿ. ಕೇಂದ್ರ ಸಚಿವರುಗಳ ಮೇಲೆ ಶೇ.39 ರಷ್ಟು ಕೇಸ್ಗಳು ಇವೆ. ಅವರನ್ನು ಒಳಗೆ ಹಾಕಬೇಕಿತ್ತು. ಅವರಿಂದ ರಾಜೀನಾಮೆ ಕೇಳಬೇಕಿತ್ತು ಎಂದರು.
ಯಾರು ಮುಡಾ ವಿಚಾರವಾಗಿ ಪಾದಯಾತ್ರೆ ಮಾಡಿದ್ದಾರೋ ಅವರು ತಮ್ಮ ಎಲೆಕ್ಷನ್ ಅಫಿಡವಿಟ್ ತೆರೆದು ನೋಡಿಕೊಳ್ಳಲಿ ಎಂದ ಅವರು, ನಮ್ಮ ದೇಶದಲ್ಲಿ ಕಾನೂನು ಇದೆ. ಕಾನೂನು ರಕ್ಷಣೆ ಪಡೆಯುವ ಅಧಿಕಾರ ಎಲ್ಲರಿಗೂ ಇದೆ. ಹುಬ್ಬಳ್ಳಿ ಗಲಭೆ ಇರಲಿ, ಮುಡಾ ಇರಲಿ ಯಾವುದೇ ಇರಲಿ ನಮ್ಮ ದೇಶದಲ್ಲಿ ಕಾನೂನು ಗೆಲ್ಲಬೇಕು. ಅದಕ್ಕೆ ಅವಕಾಶ ಕೊಡಬೇಕು ಹಾಗೂ ಅವಕಾಶ ತೆಗೆದುಕೊಳ್ಳಬೇಕು ಎಂದು ನುಡಿದರು.
ಎಷ್ಟೋ ಕೇಸ್ಗಳಲ್ಲಿ ಅಮಾಯಕರನ್ನು ಒಳಗೆ ಹಾಕಲಾಗಿತ್ತು. ಮನೆ ಹುಡುಕಿಕೊಂಡು ಬಂದು ಕೇಸ್ ಹಾಕಿರುವ ಉದಾಹರಣೆ ಕೂಡ ಇದೆ. ಖರ್ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದರೆ ಅದು ಅವರ ದೊಡ್ಡ ಗುಣ. ಅದಕ್ಕೆ ಬಿಜೆಪಿಯವರು ಖುಷಿಯಾಗಬೇಕು. ಅದಕ್ಕೆ ಯಾಕೆ ರಾಜೀನಾಮೆ ಕೇಳಬೇಕು? ಪ್ರೇರಣಾ ಟ್ರಸ್ಟ್ಗೆ ದುಡ್ಡು ಬಂದ ಮೇಲೆಯೇ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದರು. ಯಾಕೆ ಮಾಡಿದ್ದು ಎಂದರೆ ಅವರ ಬಳಿ ವಾಷಿಂಗ್ ಮಶಿನ್ ಇದೆ ಅದರಲ್ಲಿ ಹಾಕಿದ ತಕ್ಷಣ ಎಲ್ಲರೂ ಬೆಳ್ಳಗೆ ಆಗುತ್ತಾರೆ ಎಂದು ಲೇವಡಿ ಮಾಡಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…