Featured

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ : ನಮ್ಮ ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ : ಮಧು ಬಂಗಾರಪ್ಪ – vishwanews24

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ : ನಮ್ಮ ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ : ಮಧು ಬಂಗಾರಪ್ಪ

ಧಾರವಾಡ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ಸರ್ಕಾರದ ನಿರ್ಧಾರ ಸರಿಯಾಗಿದೆ. ಈ ಕೇಸ್‌ನ್ನು ವಾಪಸ್ ಪಡೆದಿದ್ದು ನಮ್ಮ ಸರ್ಕಾರ. ನಮ್ಮ ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ ಎಂದು ನಾವು ಹೇಳಬೇಕು. ಬಿಜೆಪಿಯವರು ಬೇಕಾದರೆ ಪ್ರತಿಭಟನೆ ಮಾಡಿಕೊಳ್ಳಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಸ್ ವಾಪಸ್ ಪಡೆದಿರುವುದಕ್ಕೆ ಬಿಜೆಪಿಯವರು ಪ್ರತಿಭಟನೆ ಮಾಡಲಿ ಬೇಡ ಎಂದವರಾರು? ವಕೀಲರು ಕೋರ್ಟ್ಗೆ ಹೋಗಲಿ. ಕೋರ್ಟ್ ಇರುವುದೇ ವಿಚಾರಣೆ ಮಾಡುವುದಕ್ಕೆ ಎಂದರು. ಮುಡಾ ವಿಚಾರವಾಗಿ ಬಿಜೆಪಿಯವರು ಪಾದಯಾತ್ರೆ ಮಾಡಿದರು. ಇದೇ ಬಿಜೆಪಿಯವರ ಮೇಲೆ ಎಷ್ಟು ಎಫ್‌ಐಆರ್ ಆಗಿದೆ ನೋಡಿಕೊಳ್ಳಲಿ. ಕೇಂದ್ರ ಸಚಿವರುಗಳ ಮೇಲೆ ಶೇ.39 ರಷ್ಟು ಕೇಸ್‌ಗಳು ಇವೆ. ಅವರನ್ನು ಒಳಗೆ ಹಾಕಬೇಕಿತ್ತು. ಅವರಿಂದ ರಾಜೀನಾಮೆ ಕೇಳಬೇಕಿತ್ತು ಎಂದರು.

ಯಾರು ಮುಡಾ ವಿಚಾರವಾಗಿ ಪಾದಯಾತ್ರೆ ಮಾಡಿದ್ದಾರೋ ಅವರು ತಮ್ಮ ಎಲೆಕ್ಷನ್ ಅಫಿಡವಿಟ್ ತೆರೆದು ನೋಡಿಕೊಳ್ಳಲಿ ಎಂದ ಅವರು, ನಮ್ಮ ದೇಶದಲ್ಲಿ ಕಾನೂನು ಇದೆ. ಕಾನೂನು ರಕ್ಷಣೆ ಪಡೆಯುವ ಅಧಿಕಾರ ಎಲ್ಲರಿಗೂ ಇದೆ. ಹುಬ್ಬಳ್ಳಿ ಗಲಭೆ ಇರಲಿ, ಮುಡಾ ಇರಲಿ ಯಾವುದೇ ಇರಲಿ ನಮ್ಮ ದೇಶದಲ್ಲಿ ಕಾನೂನು ಗೆಲ್ಲಬೇಕು. ಅದಕ್ಕೆ ಅವಕಾಶ ಕೊಡಬೇಕು ಹಾಗೂ ಅವಕಾಶ ತೆಗೆದುಕೊಳ್ಳಬೇಕು ಎಂದು ನುಡಿದರು.

ಎಷ್ಟೋ ಕೇಸ್‌ಗಳಲ್ಲಿ ಅಮಾಯಕರನ್ನು ಒಳಗೆ ಹಾಕಲಾಗಿತ್ತು. ಮನೆ ಹುಡುಕಿಕೊಂಡು ಬಂದು ಕೇಸ್ ಹಾಕಿರುವ ಉದಾಹರಣೆ ಕೂಡ ಇದೆ. ಖರ್ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದರೆ ಅದು ಅವರ ದೊಡ್ಡ ಗುಣ. ಅದಕ್ಕೆ ಬಿಜೆಪಿಯವರು ಖುಷಿಯಾಗಬೇಕು. ಅದಕ್ಕೆ ಯಾಕೆ ರಾಜೀನಾಮೆ ಕೇಳಬೇಕು? ಪ್ರೇರಣಾ ಟ್ರಸ್ಟ್ಗೆ ದುಡ್ಡು ಬಂದ ಮೇಲೆಯೇ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದರು. ಯಾಕೆ ಮಾಡಿದ್ದು ಎಂದರೆ ಅವರ ಬಳಿ ವಾಷಿಂಗ್ ಮಶಿನ್ ಇದೆ ಅದರಲ್ಲಿ ಹಾಕಿದ ತಕ್ಷಣ ಎಲ್ಲರೂ ಬೆಳ್ಳಗೆ ಆಗುತ್ತಾರೆ ಎಂದು ಲೇವಡಿ ಮಾಡಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

16 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

16 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

16 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

17 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

21 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

21 hours ago