ಧಾರವಾಡ: ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದ ಸರ್ಕಾರದ ನಿರ್ಧಾರ ಸರಿಯಾಗಿದೆ. ಈ ಕೇಸ್ನ್ನು ವಾಪಸ್ ಪಡೆದಿದ್ದು ನಮ್ಮ ಸರ್ಕಾರ. ನಮ್ಮ ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ ಎಂದು ನಾವು ಹೇಳಬೇಕು. ಬಿಜೆಪಿಯವರು ಬೇಕಾದರೆ ಪ್ರತಿಭಟನೆ ಮಾಡಿಕೊಳ್ಳಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಧಾರವಾಡದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಸ್ ವಾಪಸ್ ಪಡೆದಿರುವುದಕ್ಕೆ ಬಿಜೆಪಿಯವರು ಪ್ರತಿಭಟನೆ ಮಾಡಲಿ ಬೇಡ ಎಂದವರಾರು? ವಕೀಲರು ಕೋರ್ಟ್ಗೆ ಹೋಗಲಿ. ಕೋರ್ಟ್ ಇರುವುದೇ ವಿಚಾರಣೆ ಮಾಡುವುದಕ್ಕೆ ಎಂದರು. ಮುಡಾ ವಿಚಾರವಾಗಿ ಬಿಜೆಪಿಯವರು ಪಾದಯಾತ್ರೆ ಮಾಡಿದರು. ಇದೇ ಬಿಜೆಪಿಯವರ ಮೇಲೆ ಎಷ್ಟು ಎಫ್ಐಆರ್ ಆಗಿದೆ ನೋಡಿಕೊಳ್ಳಲಿ. ಕೇಂದ್ರ ಸಚಿವರುಗಳ ಮೇಲೆ ಶೇ.39 ರಷ್ಟು ಕೇಸ್ಗಳು ಇವೆ. ಅವರನ್ನು ಒಳಗೆ ಹಾಕಬೇಕಿತ್ತು. ಅವರಿಂದ ರಾಜೀನಾಮೆ ಕೇಳಬೇಕಿತ್ತು ಎಂದರು.
ಯಾರು ಮುಡಾ ವಿಚಾರವಾಗಿ ಪಾದಯಾತ್ರೆ ಮಾಡಿದ್ದಾರೋ ಅವರು ತಮ್ಮ ಎಲೆಕ್ಷನ್ ಅಫಿಡವಿಟ್ ತೆರೆದು ನೋಡಿಕೊಳ್ಳಲಿ ಎಂದ ಅವರು, ನಮ್ಮ ದೇಶದಲ್ಲಿ ಕಾನೂನು ಇದೆ. ಕಾನೂನು ರಕ್ಷಣೆ ಪಡೆಯುವ ಅಧಿಕಾರ ಎಲ್ಲರಿಗೂ ಇದೆ. ಹುಬ್ಬಳ್ಳಿ ಗಲಭೆ ಇರಲಿ, ಮುಡಾ ಇರಲಿ ಯಾವುದೇ ಇರಲಿ ನಮ್ಮ ದೇಶದಲ್ಲಿ ಕಾನೂನು ಗೆಲ್ಲಬೇಕು. ಅದಕ್ಕೆ ಅವಕಾಶ ಕೊಡಬೇಕು ಹಾಗೂ ಅವಕಾಶ ತೆಗೆದುಕೊಳ್ಳಬೇಕು ಎಂದು ನುಡಿದರು.
ಎಷ್ಟೋ ಕೇಸ್ಗಳಲ್ಲಿ ಅಮಾಯಕರನ್ನು ಒಳಗೆ ಹಾಕಲಾಗಿತ್ತು. ಮನೆ ಹುಡುಕಿಕೊಂಡು ಬಂದು ಕೇಸ್ ಹಾಕಿರುವ ಉದಾಹರಣೆ ಕೂಡ ಇದೆ. ಖರ್ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದರೆ ಅದು ಅವರ ದೊಡ್ಡ ಗುಣ. ಅದಕ್ಕೆ ಬಿಜೆಪಿಯವರು ಖುಷಿಯಾಗಬೇಕು. ಅದಕ್ಕೆ ಯಾಕೆ ರಾಜೀನಾಮೆ ಕೇಳಬೇಕು? ಪ್ರೇರಣಾ ಟ್ರಸ್ಟ್ಗೆ ದುಡ್ಡು ಬಂದ ಮೇಲೆಯೇ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದರು. ಯಾಕೆ ಮಾಡಿದ್ದು ಎಂದರೆ ಅವರ ಬಳಿ ವಾಷಿಂಗ್ ಮಶಿನ್ ಇದೆ ಅದರಲ್ಲಿ ಹಾಕಿದ ತಕ್ಷಣ ಎಲ್ಲರೂ ಬೆಳ್ಳಗೆ ಆಗುತ್ತಾರೆ ಎಂದು ಲೇವಡಿ ಮಾಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…