ಶಿವಮೊಗ್ಗ : ಹುಬ್ಬಳ್ಳಿ ಗಲಭೆ ಪ್ರರಕಣದಲ್ಲಿ ಅಪಾರ ಆಸ್ತಿ ಹಾನಿಯಾಗಿದೆ. ಅದರ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಸಮಾಜದ ಶಾಂತಿ, ಸೌಹಾರ್ದಕ್ಕೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹುಬ್ಬಳ್ಳಿ ಗಲಭೆಯಲ್ಲಿ ಆಗಿರುವ ಆಸ್ತಿ ಹಾನಿಯ ಬಗ್ಗೆ ಪರಿಶೀಲಿಸಲಾಗಿದೆ. ಈ ಎಲ್ಲಾ ಹಾನಿಯ ಮೊತ್ತವನ್ನು ಗಲಭೆಕೋರರಿಂದಲೇ ಭರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಗಲಭೆಗಳ ನಿಯಂತ್ರಣಕ್ಕೆ ಸರ್ಕಾರ ಸಶಕ್ತವಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ವಹಿಸುವುದು ಅವಶ್ಯ. ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿ ಇಲ್ಲಿ ಅನಗತ್ಯ. ನಮ್ಮ ನೆಲದ ಕಾನೂನು ಹೇಗಿದೆ ಅದರ ಮುಖಾಂತರವೇ ಕ್ರಮ ವಹಿಸಲಾಗುವುದು ಎಂದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…