Featured

ಹುಬ್ಬಳ್ಳಿ  : ನಿಮ್ಮ ಸಮುದಾಯದಲ್ಲೇ  5 ಮದುವೆ ಮಾಡಿಕೊಳ್ಳಿ ; ಹಿಂದೂಗಳ ತಂಟೆಗೆ ಬರಬೇಡಿ : ನಟ ಪ್ರಥಮ್​ ಆಕ್ರೋಶ- Vishwanews24

ಹುಬ್ಬಳ್ಳಿ  : ಹಿಂದೂ ಹುಡುಗಿಯರ ಜೊತೆ ನಿಮಗೆ ಏನು ಕೆಲಸ?  :  ಪ್ರಥಮ್

ಹುಬ್ಬಳ್ಳಿ: ಹಿಂದೂ ಧರ್ಮದ ಹುಡುಗಿಯರನ್ನು ಬೇರೆ ಧರ್ಮದವರು ಮದುವೆ ಆಗಲೇಬಾರದು. ಯಾಕೆ ಆಗಬೇಕು? ಹಿಂದೂ ಹುಡುಗಿಯರ ಜೊತೆ ನೀವು ಲವ್​ ಯಾಕೆ ಮಾಡುತ್ತೀರಿ? ಅದರಿಂದಲೇ ತಾನೆ ಇಷ್ಟೆಲ್ಲ ಕ್ರೌರ್ಯ ಆಗುತ್ತಿರುವುದು. ನಿಮ್ಮ ಪಾಡಿಗೆ, ನಿಮ್ಮ ಸಮುದಾಯದವರನ್ನೇ ಮದುವೆ ಆಗಿ. ಹಿಂದೂ ಹುಡುಗಿಯರ ಜೊತೆ ನಿಮಗೆ ಏನು ಕೆಲಸ? ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಇನ್ನೊಮ್ಮೆ ಹಿಂದೂಗಳ ತಂಟೆಗೆ ಬರಬೇಡಿ’ ಎಂದು ನಟ ಪ್ರಥಮ್​ ಹೇಳಿದ್ದಾರೆ.

ಹುಬ್ಬಳ್ಳಿ ವಿಧ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಟ ಪ್ರಥಮ್​ ಅವರು ನೇಹಾ ತಂದೆ-ತಾಯಿಯನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕಲಾವಿದರು ಎಲೆಕ್ಷನ್​ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ. ಅಂಥ ಕಲಾವಿದರನ್ನು ತಲೆ ಮೇಲೆ ಇಟ್ಟುಕೊಂಡು ಮೆರೆಸಬೇಡಿ ಎಂದರು.

ನನಗೆ ತುಂಬ ನೋವಾಯಿತು. ಅದಕ್ಕಾಗಿಯೇ ಬೆಂಗಳೂರಿನಿಂದ ಇಲ್ಲಿಗೆ ಬಂದಿದ್ದೇನೆ. ಕಡೆಗಣಿಸಿದರೆ ಪ್ರಾಣ ತೆಗೆದುಬಿಡೋದಾ? ನನ್ನ ಮಗ ಅಂಥವನಲ್ಲ ಎಂದು ಅವರ ತಾಯಿ ಹೇಳ್ತಾರೆ. ವೀರಪ್ಪ ನಾಯಕ ಸಿನಿಮಾದ ಕಥೆ ರೀತಿ ಹೇಳಿಕೆ ನೀಡ್ತಾರೆ. 20 ವರ್ಷದ ಹಿಂದೆ ಇವರು ಸಿಕ್ಕಿದ್ದಿದ್ರೆ ನಿರ್ದೇಶಕರು ಶ್ರುತಿ ಬದಲಿಗೆ ಇವರನ್ನೇ ಆಯ್ಕೆ ಮಾಡುತ್ತಿದ್ದರು’ ಎಂದಿದ್ದಾರೆ ಪ್ರಥಮ್​.

ಈಗ ಯಾರೋ ಬಂದು ಸಮಾಧಾನ ಹೇಳಿದರು. ಸಮಾಧಾನ ಹೇಳುವುದೇ ಹೌದಾದರೆ ಅವರ ಸಮುದಾಯದ ಯಾರೂ ಕೂಡ ಈ ಕೇಸ್​ ತೆಗೆದುಕೊಳ್ಳಬಾರದು ಅಂತ ಹೇಳಿ. ಮುಖಂಡರು ಹೇಳಿಕೆಗಳನ್ನು ಕೊಡುವಾಗ ನೋವು ಮಾಡಬೇಡಿ. ಇದರ ಜೊತೆ ಪಾಲಕರಿಗೆ ಒಂದು ಕಿವಿಮಾತು. ನಿಮ್ಮ ಮಕ್ಕಳು ಯಾರ ಜೊತೆ ಇರುತ್ತಾರೆ, ಎಲ್ಲಿಗೆ ಹೋಗುತ್ತಾರೆ ಎಂಬುದನ್ನು ಗಮನಿಸಿ. ಅವನು 9 ಸಲ ಚುಚ್ಚಿದ್ದಾನೆ ಎಂದರೆ ಅವನ ಮನಸ್ಥಿತಿ ಎಷ್ಟು ವಿಕೃತ ಆಗಿದೆ ನೋಡಿ. ಈ ವಿಚಾರದಲ್ಲಿ ರಾಜಕೀಯ ಬೇಡ. ಸಿನಿಮಾದ ಪ್ರಚಾರಕ್ಕೆ ಈ ಊರಿಗೆ ಬರಬೇಕು ಎಂದುಕೊಂಡಿದ್ದೆ. ಆದರೆ ಈಗ ಸಾವಿನ ಮನೆಗೆ ಬರುವಂತೆ ಆಗಿದೆ’ ಎಂದು ಪ್ರಥಮ್​ ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago