ಹುಬ್ಬಳ್ಳಿ : ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ನೇಹಾಳ ತಂದೆ ನಿರಂಜನ್ ಹಿರೇಮಠ ಆಗ್ರಹಿಸಿದರು.
2024ರ ಎಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್ನಲ್ಲಿ ವಿದ್ಯಾರ್ಥಿನಿ ನೇಹಾಳ ಕೊಲೆಯಾಗಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ನಿರಂಜನ ಹಿರೇಮಠ ಅವರ ಮಗಳು ನೇಹಾಳನ್ನ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್ ನೇಹಾಳನ್ನು ಕೊಲೆ ಮಾಡಿದ್ದನು. ಕೊಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೊಲೆ ಆರೋಪಿ ಫಯಾಜ್ನನ್ನು ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧಿಸಿದ್ದರು.
ಕಾಂಗ್ರೆಸ್ ಮುಖಂಡ ಮತ್ತು ಪಾಲಿಕೆ ಸದಸ್ಯ, ನೇಹಾ ತಂದೆ ನಿರಂಜನ್ ಹಿರೇಮಠ ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿ, ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಅಂಗಲಾಚಿದ್ದರು. ಆದರೆ, ಇಲ್ಲಿಯವರೆಗೂ ಈ ಪ್ರಕರಣದಲ್ಲಿ ಯಾವುದೇ ಬೆಳವಣಿಗೆ ಕಂಡಿಲ್ಲ ಮತ್ತು ಪಾಸ್ಟ್ಟ್ರ್ಯಾಕ್ ಕೋರ್ಟ್ ನಿರ್ಮಾಣವಾಗಿಲ್ಲ. ಹೀಗಾಗಿ ನೇಹಾ ಹತ್ಯೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ನೇಹಾ ತಂದೆ ನಿರಂಜನ್ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ 120 ದಿನಗಳಲ್ಲಿ ನನ್ನ ಮಗಳ ಸಾವಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿತ್ತು. ಆದರೆ, ಒಂಬತ್ತು ತಿಂಗಳು ಕಳೆದರೂ ನನ್ನ ಮಗಳ ಸಾವಿಗೆ ನ್ಯಾಯ ಸಿಗುವ ಭರವಸೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಹಾಗೂ ಸಿಐಡಿಯಿಂದ ನ್ಯಾಯ ಸಿಗುವ ಭರವಸೆ ಕ್ಷೀಣಿಸುತ್ತಿದೆ. ಈ ಕಾರಣದಿಂದಾಗಿಯೇ ಈ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಸಿಬಿಐಗೆ ವಹಿಸಿದರೆ ಮಾತ್ರ ನನ್ನ ಮಗಳ ಸಾವಿಗೆ ನ್ಯಾಯ ಸಿಗುತ್ತದೆ ಎಂದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…