Featured

ಹುಬ್ಬಳ್ಳಿ ನೇಹಾ ಹಿರೇಮಠ  ಹತ್ಯೆ ಪ್ರಕರಣ : ನನ್ನ ಮಗಳ ಕೊಲೆ ಹಿಂದೆ ಶಾಸಕರ ಕೈವಾಡವಿದೆ : ನೇಹಾ ತಂದೆ ಆರೋಪ – vishwanews24

ತನಿಖೆಯನ್ನು ಸಿಬಿಐಗೆ ವಹಿಸಬೇಕು, ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು :  ನೇಹಾ ತಂದೆ ನಿರಂಜನ್​ ಹಿರೇಮಠ ಆಗ್ರಹ

ಹುಬ್ಬಳ್ಳಿ : ಹುಬ್ಬಳ್ಳಿಯ ನೇಹಾ ಹಿರೇಮಠ  ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ನೇಹಾಳ ತಂದೆ ನಿರಂಜನ್​ ಹಿರೇಮಠ ಆಗ್ರಹಿಸಿದರು.

2024ರ ಎಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿ ನೇಹಾಳ ಕೊಲೆಯಾಗಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ನಿರಂಜನ ಹಿರೇಮಠ ಅವರ ಮಗಳು ನೇಹಾಳನ್ನ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್ ನೇಹಾಳನ್ನು ಕೊಲೆ ಮಾಡಿದ್ದನು. ಕೊಲೆ‌ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೊಲೆ ಆರೋಪಿ ಫಯಾಜ್​ನನ್ನು ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧಿಸಿದ್ದರು.

ಕಾಂಗ್ರೆಸ್ ಮುಖಂಡ ಮತ್ತು ಪಾಲಿಕೆ ಸದಸ್ಯ, ನೇಹಾ ತಂದೆ ನಿರಂಜನ್​ ಹಿರೇಮಠ ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿ, ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಅಂಗಲಾಚಿದ್ದರು. ಆದರೆ, ಇಲ್ಲಿಯವರೆಗೂ ಈ ಪ್ರಕರಣದಲ್ಲಿ ಯಾವುದೇ ಬೆಳವಣಿಗೆ ಕಂಡಿಲ್ಲ ಮತ್ತು ಪಾಸ್ಟ್‌ಟ್ರ್ಯಾಕ್ ಕೋರ್ಟ್ ನಿರ್ಮಾಣವಾಗಿಲ್ಲ. ಹೀಗಾಗಿ ನೇಹಾ ಹತ್ಯೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ನೇಹಾ ತಂದೆ ನಿರಂಜನ್​ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ 120 ದಿನಗಳಲ್ಲಿ ನನ್ನ ಮಗಳ ಸಾವಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿತ್ತು. ಆದರೆ, ಒಂಬತ್ತು ತಿಂಗಳು ಕಳೆದರೂ ನನ್ನ ಮಗಳ‌ ಸಾವಿಗೆ ನ್ಯಾಯ ಸಿಗುವ ಭರವಸೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಹಾಗೂ ಸಿಐಡಿಯಿಂದ ನ್ಯಾಯ ಸಿಗುವ ಭರವಸೆ ಕ್ಷೀಣಿಸುತ್ತಿದೆ. ಈ‌ ಕಾರಣದಿಂದಾಗಿಯೇ ಈ‌ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಸಿಬಿಐಗೆ ವಹಿಸಿದರೆ ಮಾತ್ರ ನನ್ನ ಮಗಳ‌ ಸಾವಿಗೆ ನ್ಯಾಯ ಸಿಗುತ್ತದೆ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago