Featured

ಹುಬ್ಬಳ್ಳಿ, ಹೈದರಾಬಾದ್ ನಡುವಿನ ವಿಮಾನಯಾನಕ್ಕೆ ಚಾಲನೆ -Vishwanews24

ಹುಬ್ಬಳ್ಳಿ, ಹೈದರಾಬಾದ್ ನಡುವಿನ ವಿಮಾನಯಾನಕ್ಕೆ ಚಾಲನೆ -Vishwanews24

ಹುಬ್ಬಳ್ಳಿ: ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಹೈದರಾಬಾದ್ ನಗರಕ್ಕೆ ವಿಮಾನಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅಲೈಯನ್ಸ್ ಏರ್ ವೇಸ್ ನಿಂದ ಹೈದರಾಬಾದ್ ನಗರಕ್ಕೆ ಆರಂಭಿಸಲಾದ ವಿಮಾನಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ವಾರದಲ್ಲಿ ಮೂರು ದಿನ ಹೈದರಾಬಾದ್ ನಗರಕ್ಕೆ ವಿಮಾನ ಸಂಚರಿಸಲಿದೆ. ಪ್ರಯಾಣಿಕರ ಸಂಖ್ಯೆ ಆಧರಿಸಿ ಮುಂದಿನ ದಿನಗಳಲ್ಲಿ ವಾರದ ಏಳು ದಿನವೂ ಸೇವೆ ವಿಸ್ತರಿಸಲಾಗುವುದು. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿಯವರ ವಿಶೇಷ ಪ್ರಯತ್ನದಿಂದ ಹೈದರಾಬಾದ್ ನಗರಕ್ಕೆ ವಿಮಾನ ಯಾನ ಸೇವೆ ಆರಂಭವಾಗಿದೆ. ಅವರಿಗೆ ವಿಶೇಷ ಧನ್ಯವಾದಗಳು. ಹುಬ್ಬಳ್ಳಿ ಮಂಗಳೂರಿಗೆ ನಡುವೆ ವಿಮಾನ ಸಂಪರ್ಕ ಕಲ್ಪಿಸಲು ಬೇಡಿಕೆ ಇದೆ. ಇದನ್ನು ಸಹ ಶೀಘ್ರವಾಗಿ ಪ್ರಾರಂಭಿಸಲಾಗುವುದು.

ಇದನ್ನೂ ಓದಿ : ಶಿರ್ವ ಗ್ರಾ.ಪಂ. ಉಪ ಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿ ನ್ಯಾರ್ಮ ಶ್ರೀನಿವಾಸ ಶೆಣೈ ಗೆಲುವು -Vishwanews24

ಹುಬ್ಬಳ್ಳಿಯಲ್ಲಿ ರಾತ್ರಿ ಸಹ ವಿಮಾನ ಇಳಿಯಲು ಅವಕಾಶವಿದೆ. ಸ್ವಯಂ ಚಾಲಿತ ಲ್ಯಾಂಡಿಗ್ ಗೆ ವ್ಯವಸ್ಥೆಯಿದೆ. ಈಗಿನ ರನ್ ವೇ ಟ್ರಾಕ್ ವಿಸ್ತರಣೆ ಮಾಡಲಾಗುವುದು. ಮಧ್ಯ ಪ್ರಾಚ್ಯ ರಾಷ್ಟ್ರಗಳಿಗೆ ನೇರವಾಗಿ ವಿಮಾನ ಸೌಲಭ್ಯ ಕಲ್ಪಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಕಳುಹಿಸಲು ವಿಮಾನ ನಿಲ್ದಾಣ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ರನ್ ವೇ ವಿಸ್ತರಿಸಿದ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನೇರವಾಗಿ ಅಂತರರಾಷ್ಟ್ರೀಯ ವಿಮಾನ ಸೇವೆಗಳು ಆರಂಭವಾಗಲಿವೆ. ಈಗಾಗಲೇ ಮುಂಬೈ, ಅಹಮದಾಬಾದ್, ಕೊಚ್ಚಿ, ಕೊಣ್ಣೂರ್, ಗೋವಾಗಳಿಗೆ ವಿಮಾನಯಾನ ಸೌಲಭ್ಯ ಕಲ್ಪಿಸಲಾಗಿದೆ. ಕೊರೊನಾ ನಂತರದ ಸ್ಥಿತಿಗತಿಗಳನ್ನು ನೋಡಿಕೊಂಡು ಇತರೆ ನಗರಗಳಿಗೂ ವಿಮಾನ ಸಂಪರ್ಕ ಕಲ್ಪಿಸಲಾಗುವುದು. ಟ್ರೂ ಜಟ್ ಮಾಲೀಕರೊಂದಿಗೆ ಹೆಚ್ಚಿನ ವಿಮಾನ ಸಂಪರ್ಕ ಕಲ್ಪಿಸುವಂತೆ ಮಾತುಕತೆ ನಡೆಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ ಕುಮಾರ್ ಠಾಕರೆ, ವಿಮಾನ ನಿಲ್ದಾಣ ಭದ್ರತಾಧಿಕಾರಿ ಜಗದೀಶ್ ಹಂಚಿನಾಳ್, ಏರ್ ಇಂಡಿಯಾ ಸಿಬ್ಬಂದಿ ನಾಗೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

5 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

6 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

6 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago