ಕಲಬುರಗಿ: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ ನೆಲದ ಕಾನೂನು ಬಳಕೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಪ್ರಾಣಿಗಳನ್ನು ಹತ್ಯೆ ಮಾಡಿ ಅವುಗಳ ಹಲ್ಲು, ಚರ್ಮ, ಕೊಂಬು ಹಾಗೂ ಇತರೆ ಅಂಗಗಳ ಬಳಕೆ ಮಾಡಿರುವುದು ಬಯಲಾಗಿ ಶಿಕ್ಷೆಗೆ ಒಳಗಾಗಿರುವುದು ಗೊತ್ತಿರುವ ವಿಚಾರ. ಈಗ ರಾಜ್ಯದಲ್ಲೂ ನಡೆಯುತ್ತಿರುವ ವಿದ್ಯಾಮಾನಗಳಲ್ಲಿ ಹುಲಿ ಉಗುರು ಬಳಕೆ ಮಾಡಿ ಜನರಲ್ಲಿ ಆಕರ್ಷಣೆ ಉಂಟು ಮಡುತ್ತಿರುವ ಹಿನ್ನೆಲೆಯಲ್ಲಿ ಕೆಲವರನ್ನು ಬಂಧಿಸಲಾಗಿದೆ ಎಂದರು.
ಇನ್ನಷ್ಟು ಬಂಧನದ ಸಾಧ್ಯತೆಗಳನ್ನು ಅವರು ನಿರಾಕರಿಸದೆ ನೆಲದ ಕಾನೂನಿನಂತೆ ಕ್ರಮ ಜರುಗುಸಲಾಗುವುದು ಎಂದು ತಿಳಿಸಿದರು..
ಕನ್ನಡ ಚಲನಚಿತ್ರ ನಟ ದರ್ಶನ ಹಾಗೂ ವಿನಯ ಗುರೂಜಿ ಅವರು ಸಾರ್ವಜನಿಕವಾಗಿ ಹುಲಿ ಉಗುರು ತೊಟ್ಟು ಆಕ್ಷೇಪಾರ್ಹವಾಗಿ ನಡೆದು ಕೊಂಡಿದ್ದಾರೆ ಎನ್ನುವ ನಿಟ್ಟಿನಲ್ಲಿ ಕ್ರಮ ಜರುಗಿಸಲು ಅಧಿಕಾರಿಗಳು ಬದ್ಧರಾಗಿದ್ದಾರೆ ಎಂದರು.
ಸಾರ್ವಜನಿಕರು ಈ ನಿಟ್ಟಿನಲ್ಲಿ ದೂರು ನೀಡಿದರೆ, ನೆಲದ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ಪ್ರಾಣಿಜನ್ಯ ವಸ್ತು ಗಳ ಬಳಕೆ ಸಂಗ್ರಹ, ಸಾಗಾಟ ಮೊದಲಿನಿಂದಲೂ ನಿಷೇಧ ಮಾಡಲಾಗಿದೆ. ಈ ಅಪರಾಧಕ್ಕೆ ಏಳು ವರ್ಷ ದ ಶಿಕ್ಷೆಯೂ ಇದೆ ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…