Featured

ಹುಲಿ ಉಗುರು ಪ್ರಕರಣ- ಯಾರೇ ಇರಲಿ ಕಾನೂನಿನಂತೆ ಕ್ರಮ : ಅರಣ್ಯ ಸಚಿವ ಈಶ್ವರ ಖಂಡ್ರೆ – Vishwanews24

ಹುಲಿ ಉಗುರು ಪ್ರಕರಣ- ಯಾರೇ ಇರಲಿ  ಕಾನೂನಿನಂತೆ ಕ್ರಮ  : ಅರಣ್ಯ ಸಚಿವ ಈಶ್ವರ ಖಂಡ್ರೆ

ಕಲಬುರಗಿ: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ ನೆಲದ ಕಾನೂನು ಬಳಕೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಪ್ರಾಣಿಗಳನ್ನು ಹತ್ಯೆ ಮಾಡಿ ಅವುಗಳ ಹಲ್ಲು, ಚರ್ಮ, ಕೊಂಬು ಹಾಗೂ ಇತರೆ ಅಂಗಗಳ ಬಳಕೆ ಮಾಡಿರುವುದು ಬಯಲಾಗಿ ಶಿಕ್ಷೆಗೆ ಒಳಗಾಗಿರುವುದು ಗೊತ್ತಿರುವ ವಿಚಾರ. ಈಗ ರಾಜ್ಯದಲ್ಲೂ ನಡೆಯುತ್ತಿರುವ ವಿದ್ಯಾಮಾನಗಳಲ್ಲಿ ಹುಲಿ ಉಗುರು ಬಳಕೆ ಮಾಡಿ ಜನರಲ್ಲಿ ಆಕರ್ಷಣೆ ಉಂಟು ಮಡುತ್ತಿರುವ ಹಿನ್ನೆಲೆಯಲ್ಲಿ ಕೆಲವರನ್ನು ಬಂಧಿಸಲಾಗಿದೆ ಎಂದರು.

ಇನ್ನಷ್ಟು ಬಂಧನದ ಸಾಧ್ಯತೆಗಳನ್ನು ಅವರು ನಿರಾಕರಿಸದೆ ನೆಲದ ಕಾನೂನಿನಂತೆ ಕ್ರಮ ಜರುಗುಸಲಾಗುವುದು ಎಂದು ತಿಳಿಸಿದರು..

ಕನ್ನಡ ಚಲನಚಿತ್ರ ನಟ ದರ್ಶನ ಹಾಗೂ ವಿನಯ ಗುರೂಜಿ ಅವರು ಸಾರ್ವಜನಿಕವಾಗಿ ಹುಲಿ ಉಗುರು ತೊಟ್ಟು ಆಕ್ಷೇಪಾರ್ಹವಾಗಿ ನಡೆದು ಕೊಂಡಿದ್ದಾರೆ ಎನ್ನುವ ನಿಟ್ಟಿನಲ್ಲಿ ಕ್ರಮ ಜರುಗಿಸಲು ಅಧಿಕಾರಿಗಳು ಬದ್ಧರಾಗಿದ್ದಾರೆ ಎಂದರು.

ಸಾರ್ವಜನಿಕರು ಈ ನಿಟ್ಟಿನಲ್ಲಿ ದೂರು ನೀಡಿದರೆ, ನೆಲದ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ಪ್ರಾಣಿಜನ್ಯ ವಸ್ತು ಗಳ ಬಳಕೆ ಸಂಗ್ರಹ, ಸಾಗಾಟ ಮೊದಲಿನಿಂದಲೂ ನಿಷೇಧ ಮಾಡಲಾಗಿದೆ. ಈ ಅಪರಾಧಕ್ಕೆ ಏಳು ವರ್ಷ ದ ಶಿಕ್ಷೆಯೂ ಇದೆ ಎಂದು ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago