Featured

ಹುಷಾರ್…ಬ್ಲೂವೇಲ್‍ಗಿಂತಲೂ ಡೇಂಜರಸ್ ಮೊಮೊ ಸೂಸೈಡ್ ಗೇಮ್..!

ನವದೆಹಲಿ:,-ಅನೇಕರನ್ನು ಬಲಿ ತೆಗೆದುಕೊಂಡ ಬ್ಲೂವೇಲ್ ಗೇಮ್ ಹಾವಳಿ ಕಡಿಮೆಯಾಗಿ ಜನರ ನಿರಾಶವಾಗುತ್ತಿರುವ ಸಂದರ್ಭದಲ್ಲೇ ಮತ್ತೊಂದು ಮಹಾಮಾರಿ ಆತಂಕ ಮೂಡಿಸಿದೆ. ಬ್ಲೂವೇಲ್‍ಗಿಂತಲೂ ಖತರ್ನಾಕ್ ಆಗಿರುವ ಇದರ ಹೆಸರು ಮೊಮೊ ಚಾಲೆಂಜ್. ವ್ಯಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಗೇಮ್‍ಗೆ ಆಹ್ವಾನಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡುವ ಭಯಾನಕ ಗೇಮ್ ಇದಾಗಿದೆ.

ಮಕ್ಕಳು ಮತ್ತು ಯುವಜನಾಂಗಕ್ಕೆ ಇದರಿಂದ ದೊಡ್ಡ ಕಂಟಕವಾಗುವ ಭೀತಿ ಆವರಿಸಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮೊಮೊ ಚಾಲೆಂಜ್‍ನ ಕಬಂಧ ಬಾಹುಗಳು ಚಾಚಿಕೊಂಡಿರುವುದು ಪೊಲೀಸರ ನಿದ್ದೆಗೆಡಿಸಿದೆ. ಕೀಕೀ ಡ್ಯಾನ್ಸ್ ಚಾಲೆಂಜ್‍ನಿಂದ ಜನರು ಕಿರಿಕಿರಿ ಅನುಭವಿಸುತ್ತಿರುವಾಗಲೇ ಮೊಮೊ ಭೂತದ ಆತಂಕದಿಂದ ಭಯಪಡುವಂತಾಗಿದೆ.  ದೊಡ್ಡ ಕಣ್ಣುಗುಡ್ಡೆಗಳು ಹೊರಬಂದಿರುವ ವಿಕಾರ ರೂಪದ ಮೊಮೊ ಹೆಸರಿನಲ್ಲಿ ಚಾಲೆಂಜ್ ಹಾಕುವ ಸಂದೇಶಗಳು ಮೊಬೈಲ್ ಫೋನ್‍ಗಳಲ್ಲಿ ಈಗಾಗಲೇ ಹರಿದಾಡುತ್ತಿವೆ. ಯಾವುದೇ ಒಂದು ಸ್ಥಳಕ್ಕೆ ಮಕ್ಕಳು ಅಥವಾ ಯುವಕ-ಯುವತಿಯರನ್ನು ಆಹ್ವಾನಿಸಿ ಸೂಸೈಡ್ ಗೇಮ್‍ಗಳಿಗೆ ಪ್ರಚೋದನೆ ನೀಡುವ ಭಯಾನಕ ಸೂಸೈಡ್ ಗೇಮ್ ಇದಾಗಿದೆ.

ವ್ಯಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಮಕ್ಕಳನ್ನು ಹೆದರಿಸಿ ಕಾಡುವ ಮೊಮೊ ಗುಮ್ಮ ಇದಾಗಿದೆ. ಈ ಚಾಲೆಂಜ್ ಸ್ವೀಕರಿಸಿ ಅದನ್ನು ಅನುಸರಿಸಿದರೆ ಬ್ಲೂವೇಲ್ ಆನ್‍ಲೈನ್ ಗೇಮ್‍ನಂತೆ ಜೀವ ಕಳೆದುಕೊಳ್ಳುವ ಸಾಧ್ಯತೆ ಇದೆ. ಕೇರಳ ರಾಜ್ಯದ ಅಳಪುಳದಲ್ಲಿ ನಿನ್ನೆಯಷ್ಟೇ ಮೊಮೊ ಹೆಸರಿನಲ್ಲಿ ಯುವಕನೊಬ್ಬನಿಗೆ ಸಂದೇಶವೊಂದು ರವಾನೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ವಾತಾವರಣ ತಲೆದೋರಿತ್ತು. ಜಿಲ್ಲಾ ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಇಂಥ ಸಂದೇಶಗಳಿಗೆ ಹೆದರಬೇಡಿ. ಮೆಸೇಜ್‍ನಲ್ಲಿ ಹಾಕುವ ಸವಾಲುಗಳನ್ನು ಯಾವುದೇ ಕಾರಣಕ್ಕೂ ಅನುಸರಿಸಬೇಡಿ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಎಂದು ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago