ನವದೆಹಲಿ:,-ಅನೇಕರನ್ನು ಬಲಿ ತೆಗೆದುಕೊಂಡ ಬ್ಲೂವೇಲ್ ಗೇಮ್ ಹಾವಳಿ ಕಡಿಮೆಯಾಗಿ ಜನರ ನಿರಾಶವಾಗುತ್ತಿರುವ ಸಂದರ್ಭದಲ್ಲೇ ಮತ್ತೊಂದು ಮಹಾಮಾರಿ ಆತಂಕ ಮೂಡಿಸಿದೆ. ಬ್ಲೂವೇಲ್ಗಿಂತಲೂ ಖತರ್ನಾಕ್ ಆಗಿರುವ ಇದರ ಹೆಸರು ಮೊಮೊ ಚಾಲೆಂಜ್. ವ್ಯಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಗೇಮ್ಗೆ ಆಹ್ವಾನಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡುವ ಭಯಾನಕ ಗೇಮ್ ಇದಾಗಿದೆ.
ಮಕ್ಕಳು ಮತ್ತು ಯುವಜನಾಂಗಕ್ಕೆ ಇದರಿಂದ ದೊಡ್ಡ ಕಂಟಕವಾಗುವ ಭೀತಿ ಆವರಿಸಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮೊಮೊ ಚಾಲೆಂಜ್ನ ಕಬಂಧ ಬಾಹುಗಳು ಚಾಚಿಕೊಂಡಿರುವುದು ಪೊಲೀಸರ ನಿದ್ದೆಗೆಡಿಸಿದೆ. ಕೀಕೀ ಡ್ಯಾನ್ಸ್ ಚಾಲೆಂಜ್ನಿಂದ ಜನರು ಕಿರಿಕಿರಿ ಅನುಭವಿಸುತ್ತಿರುವಾಗಲೇ ಮೊಮೊ ಭೂತದ ಆತಂಕದಿಂದ ಭಯಪಡುವಂತಾಗಿದೆ. ದೊಡ್ಡ ಕಣ್ಣುಗುಡ್ಡೆಗಳು ಹೊರಬಂದಿರುವ ವಿಕಾರ ರೂಪದ ಮೊಮೊ ಹೆಸರಿನಲ್ಲಿ ಚಾಲೆಂಜ್ ಹಾಕುವ ಸಂದೇಶಗಳು ಮೊಬೈಲ್ ಫೋನ್ಗಳಲ್ಲಿ ಈಗಾಗಲೇ ಹರಿದಾಡುತ್ತಿವೆ. ಯಾವುದೇ ಒಂದು ಸ್ಥಳಕ್ಕೆ ಮಕ್ಕಳು ಅಥವಾ ಯುವಕ-ಯುವತಿಯರನ್ನು ಆಹ್ವಾನಿಸಿ ಸೂಸೈಡ್ ಗೇಮ್ಗಳಿಗೆ ಪ್ರಚೋದನೆ ನೀಡುವ ಭಯಾನಕ ಸೂಸೈಡ್ ಗೇಮ್ ಇದಾಗಿದೆ.
ವ್ಯಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಮಕ್ಕಳನ್ನು ಹೆದರಿಸಿ ಕಾಡುವ ಮೊಮೊ ಗುಮ್ಮ ಇದಾಗಿದೆ. ಈ ಚಾಲೆಂಜ್ ಸ್ವೀಕರಿಸಿ ಅದನ್ನು ಅನುಸರಿಸಿದರೆ ಬ್ಲೂವೇಲ್ ಆನ್ಲೈನ್ ಗೇಮ್ನಂತೆ ಜೀವ ಕಳೆದುಕೊಳ್ಳುವ ಸಾಧ್ಯತೆ ಇದೆ. ಕೇರಳ ರಾಜ್ಯದ ಅಳಪುಳದಲ್ಲಿ ನಿನ್ನೆಯಷ್ಟೇ ಮೊಮೊ ಹೆಸರಿನಲ್ಲಿ ಯುವಕನೊಬ್ಬನಿಗೆ ಸಂದೇಶವೊಂದು ರವಾನೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ವಾತಾವರಣ ತಲೆದೋರಿತ್ತು. ಜಿಲ್ಲಾ ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಇಂಥ ಸಂದೇಶಗಳಿಗೆ ಹೆದರಬೇಡಿ. ಮೆಸೇಜ್ನಲ್ಲಿ ಹಾಕುವ ಸವಾಲುಗಳನ್ನು ಯಾವುದೇ ಕಾರಣಕ್ಕೂ ಅನುಸರಿಸಬೇಡಿ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಎಂದು ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…