ಉಡುಪಿ

ಹುಸೈನಬ್ಬ ಕೊಲೆ: ಬಜರಂಗಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಖಂಡನಾರ್ಹ: ಪ್ರಮೋದ್

ಉಡುಪಿ: ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಕೋಮುದ್ವೇಷ ಸಂಬಂಧಿ ಘಟನೆಗಳಲ್ಲಿ ಯಾರೊಬ್ಬರ ಪ್ರಾಣ ಹಾನಿಯೂ ಆಗಿರಲಿಲ್ಲ. ನಾನು ಅಧಿಕಾರದಿಂದ ಇಳಿದ ಕ್ಷಣವೇ ಬಜರಂಗದಳ ಮತ್ತು ಪೊಲೀಸರಿಂದ ವಯೋವೃದ್ಧ ಮುಸ್ಲಿಮ್ ನಾಗರಿಕರೋರ್ವರ ಕೊಲೆಯಾಗಿರುವುದು ನಿಜಕ್ಕೂ ಆಘಾತಕರ ಮತ್ತು ಅತ್ಯಂತ ಖಂಡನೀಯ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಈ ಮೂಲಕ ಪ್ರಮೋದ್ ಮಧ್ವರಾಜ್ ಅವರು ತನ್ನ ರಾಜಕೀಯ ವಿರೋಧಿ ಮತ್ತು ಶಾಸಕ ರಘುಪತಿ ಭಟ್ ಅವರ ವಿರುದ್ದ ಟೀಕಾಸ್ತ್ರ ಬಿಟ್ಟಿದ್ದಾರೆ.

ಜೋಕಟ್ಟೆಯ ದನದ ವ್ಯಾಪಾರಿ ಹುಸೈನಬ್ಬ(61) ಶಂಕಾಸ್ಪದ ಸಾವಿನ ಪ್ರಕರಣದಲ್ಲಿ ಬಂಧಿತ  ಹಿರಿಯಡ್ಕ ಎಸ್ಸೈ ಮತ್ತು ಇಬ್ಬರು ಪೊಲೀಸ್ ಸಿಬಂದಿಯನ್ನು ಕಾರವಾರ ಜೈಲಿನಲ್ಲಿ ಇರಿಸಲಾಗಿದೆ.

ಜೂನ್ 3ರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. ಆರೋಪಿಗಳನ್ನು ಕಾರವಾರ ಜೈಲಿನಲ್ಲಿ ಇರಿಸುವಂತೆ ಸೂಚಿಸಲಾಗಿದ್ದು, ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸಲಾಗುವುದು.

ಹಿರಿಯಡ್ಕ ಎಸ್ಸೈ ಡಿ.ಎನ್. ಕುಮಾರ್, ಠಾಣೆಯ ಜೀಪ್ ಚಾಲಕ ಗೋಪಾಲ, ಎಚ್. ಸಿ ಮೋಹನ ಕೊತ್ವಾಲ, ಬಜರಂಗದಳ ಕಾರ್ಯಕರ್ತರಾದ ಪೆರ್ಡೂರು ಪಕಾಲುವಿನ ಚೇತನ್ ಯಾನೆ ಚೇತನ್ ಆಚಾರ್ಯ(22), ಪೆರ್ಡೂರು ಅಲಂಗಾರು ನಿವಾಸಿ ಶೈಲೇಶ ಶೆಟ್ಟಿ(20). ಪೆರ್ಡೂರು ಕೆನ್ನೆತ್ ಬೈಲುವಿನ ಗಣೇಶ ನಾಯ್ಕ(24) ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

ಬಜರಂಗದಳ ಕಾರ್ಯಕರ್ತರು ಹಲ್ಲೆಗೈದ ಬಳಿಕ ಹುಸೈನಬ್ಬ ಅವರನ್ನು ಪೊಲೀಸರಿಗೆ ನೀಡಿದ್ದರು. ಈ ವೇಳೆ ಜೀಪಿನ ಹಿಂಬದಿ ಇದ್ದ ಹುಸೈನಬ್ಬ ಅಲ್ಲೇ ಸಾವಪ್ಪಿದ್ದರು. ದನ ಸಾಗಾಟದ ಸ್ಕಾರ್ಪಿಯೊವನ್ನು ಸುರೇಶ್ ಮೆಂಡನ್ ಮತ್ತು ಇತರ ಆರೋಪಿಗಳು ಠಾಣೆಗೆ ತಂದಿದ್ದರು ಎಂಬ ಸಂಗತಿ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಜರಂಗಿಗಳಿಂದ ಹಲ್ಲೆಗೊಳಗಾಗಿದ್ದ ಹುಸೈನಬ್ಬ ಅವರು ಪೊಲೀಸ್ ಜೀಪಿನಲ್ಲೇ ಸಾವಪ್ಪಿರುವುದು ತನಿಖೆಯಿಂದ ಬಯಲಾಗುವ ಮೂಲಕ ಕರಾವಳಿಯಲ್ಲಿ ಹಲವು ಪೊಲೀಸರು ಸಂಘಪರಿವಾರದ ಕಾರ್ಯಕರ್ತರೊಂದಿಗೆ ಕೈಮಿಲಾಯಿಸಿದ್ದಾರೆ ಎಂಬ ಅನುಮಾನಗಳಿಗೆ ಪುಷ್ಠಿ ಬಂದಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

18 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

18 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

19 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

20 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

21 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

21 hours ago