ಉಡುಪಿ

ಹುಸೈನಬ್ಬ ಕೊಲೆ: ಬಜರಂಗಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಖಂಡನಾರ್ಹ: ಪ್ರಮೋದ್

ಉಡುಪಿ: ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಕೋಮುದ್ವೇಷ ಸಂಬಂಧಿ ಘಟನೆಗಳಲ್ಲಿ ಯಾರೊಬ್ಬರ ಪ್ರಾಣ ಹಾನಿಯೂ ಆಗಿರಲಿಲ್ಲ. ನಾನು ಅಧಿಕಾರದಿಂದ ಇಳಿದ ಕ್ಷಣವೇ ಬಜರಂಗದಳ ಮತ್ತು ಪೊಲೀಸರಿಂದ ವಯೋವೃದ್ಧ ಮುಸ್ಲಿಮ್ ನಾಗರಿಕರೋರ್ವರ ಕೊಲೆಯಾಗಿರುವುದು ನಿಜಕ್ಕೂ ಆಘಾತಕರ ಮತ್ತು ಅತ್ಯಂತ ಖಂಡನೀಯ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಈ ಮೂಲಕ ಪ್ರಮೋದ್ ಮಧ್ವರಾಜ್ ಅವರು ತನ್ನ ರಾಜಕೀಯ ವಿರೋಧಿ ಮತ್ತು ಶಾಸಕ ರಘುಪತಿ ಭಟ್ ಅವರ ವಿರುದ್ದ ಟೀಕಾಸ್ತ್ರ ಬಿಟ್ಟಿದ್ದಾರೆ.

ಜೋಕಟ್ಟೆಯ ದನದ ವ್ಯಾಪಾರಿ ಹುಸೈನಬ್ಬ(61) ಶಂಕಾಸ್ಪದ ಸಾವಿನ ಪ್ರಕರಣದಲ್ಲಿ ಬಂಧಿತ  ಹಿರಿಯಡ್ಕ ಎಸ್ಸೈ ಮತ್ತು ಇಬ್ಬರು ಪೊಲೀಸ್ ಸಿಬಂದಿಯನ್ನು ಕಾರವಾರ ಜೈಲಿನಲ್ಲಿ ಇರಿಸಲಾಗಿದೆ.

ಜೂನ್ 3ರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. ಆರೋಪಿಗಳನ್ನು ಕಾರವಾರ ಜೈಲಿನಲ್ಲಿ ಇರಿಸುವಂತೆ ಸೂಚಿಸಲಾಗಿದ್ದು, ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸಲಾಗುವುದು.

ಹಿರಿಯಡ್ಕ ಎಸ್ಸೈ ಡಿ.ಎನ್. ಕುಮಾರ್, ಠಾಣೆಯ ಜೀಪ್ ಚಾಲಕ ಗೋಪಾಲ, ಎಚ್. ಸಿ ಮೋಹನ ಕೊತ್ವಾಲ, ಬಜರಂಗದಳ ಕಾರ್ಯಕರ್ತರಾದ ಪೆರ್ಡೂರು ಪಕಾಲುವಿನ ಚೇತನ್ ಯಾನೆ ಚೇತನ್ ಆಚಾರ್ಯ(22), ಪೆರ್ಡೂರು ಅಲಂಗಾರು ನಿವಾಸಿ ಶೈಲೇಶ ಶೆಟ್ಟಿ(20). ಪೆರ್ಡೂರು ಕೆನ್ನೆತ್ ಬೈಲುವಿನ ಗಣೇಶ ನಾಯ್ಕ(24) ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

ಬಜರಂಗದಳ ಕಾರ್ಯಕರ್ತರು ಹಲ್ಲೆಗೈದ ಬಳಿಕ ಹುಸೈನಬ್ಬ ಅವರನ್ನು ಪೊಲೀಸರಿಗೆ ನೀಡಿದ್ದರು. ಈ ವೇಳೆ ಜೀಪಿನ ಹಿಂಬದಿ ಇದ್ದ ಹುಸೈನಬ್ಬ ಅಲ್ಲೇ ಸಾವಪ್ಪಿದ್ದರು. ದನ ಸಾಗಾಟದ ಸ್ಕಾರ್ಪಿಯೊವನ್ನು ಸುರೇಶ್ ಮೆಂಡನ್ ಮತ್ತು ಇತರ ಆರೋಪಿಗಳು ಠಾಣೆಗೆ ತಂದಿದ್ದರು ಎಂಬ ಸಂಗತಿ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಜರಂಗಿಗಳಿಂದ ಹಲ್ಲೆಗೊಳಗಾಗಿದ್ದ ಹುಸೈನಬ್ಬ ಅವರು ಪೊಲೀಸ್ ಜೀಪಿನಲ್ಲೇ ಸಾವಪ್ಪಿರುವುದು ತನಿಖೆಯಿಂದ ಬಯಲಾಗುವ ಮೂಲಕ ಕರಾವಳಿಯಲ್ಲಿ ಹಲವು ಪೊಲೀಸರು ಸಂಘಪರಿವಾರದ ಕಾರ್ಯಕರ್ತರೊಂದಿಗೆ ಕೈಮಿಲಾಯಿಸಿದ್ದಾರೆ ಎಂಬ ಅನುಮಾನಗಳಿಗೆ ಪುಷ್ಠಿ ಬಂದಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago