Featured

ಹೂ ಗುಚ್ಛ ಸ್ಮರಣಿಕೆ ನೀಡುವ ಬದಲು ನೋಟ್ ಪುಸ್ತಕ ನೀಡಿ ಇದನ್ನು ಸಂಗ್ರಹಿಸಿ ನಾನು ಶಾಲಾ ಮಕ್ಕಳಿಗೆ ನೀಡುತ್ತೇನೆ : ಶಾಸಕ ಭರತ್ ಶೆಟ್ಟಿ – Vishwanews24

ಮಂಗಳೂರು: ಸಂಪ್ರದಾಯವನ್ನು ಮುರಿದು ಫಲಪುಷ್ಪ ಹೂ ಗುಚ್ಛದ ಬದಲಾಗಿ ಬರೆಯುವಂತಹ ನೋಟ್ ಪುಸ್ತಕಗಳನ್ನು ಕಾಣಿಕೆಯಾಗಿ ಯು ಗೌರವಾರ್ಥವಾಗಿ ಯೂ ನೀಡಿದರೆ ಅದು ಬಡ ವಿದ್ಯಾರ್ಥಿಗಳಿಗೆ ಸಹಾಯವಾಗಬಹುದು ನಾನು ಬಡ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಸಹಾಯದ ರೂಪದಲ್ಲಿ ನೀಡುವುದಕ್ಕೆ ನೀವು ಕೊಟ್ಟ ಗೌರವಾರ್ಥ ದ ಪುಸ್ತಕಗಳು ಆ ಮಕ್ಕಳಿಗೆ ಮತ್ತಷ್ಟು ಸಹಾಯಕವಾಗಬಹುದು ಎಂದು ಭರತ್ ಶೆಟ್ಟಿ ಅವರು ಅಭಿಪ್ರಾಯಪಟ್ಟಿದ್ದಾರೆ.

” ನನ್ನ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ನಾಗರಿಕ ಬಂಧುಗಳಲ್ಲಿ ವಿನಂತಿ. ಶಾಸಕನ ನೆಲೆಯಲ್ಲಿ ನಾನು ಅನೇಕ ಕಾರ್ಯಕ್ರಮಗಳಲ್ಲಿ ನಿಮ್ಮೊಂದಿಗೆ ಭಾಗವಹಿಸುತ್ತಿದ್ದೇನೆ. ನಿಮ್ಮ ಗೌರವಪೂರ್ವಕವಾಗಿ ಹೂ ಹಾರ, ಹೂಗುಚ್ಚ, ಸ್ಮರಣಿಕೆ ಕೊಡುತ್ತೀರಿ. ನಿಮ್ಮ ಪ್ರೀತಿಗೆ ಆಭಾರಿಯಾಗಿದ್ದೇನೆ. ಆದರೆ ಹೂಹಾರ, ಬೊಕ್ಕೆಗಳನ್ನು ಕೊಡುವುದಕ್ಕಿಂತ ತಾವು ನೋಟ್ ಬುಕ್ ಗಳನ್ನು ಕೊಟ್ಟರೆ ಅವುಗಳನ್ನು ಸಂಗ್ರಹಿಸಿ ಶಾಲಾ ಮಕ್ಕಳಿಗೆ ಕೊಡಬಹುದು. ಅವು ಹಾಳಾಗುವುದಿಲ್ಲ ಮತ್ತು ವ್ಯರ್ಥವೂ ಆಗುವುದಿಲ್ಲ.

ಇನ್ನು ಮುಂದೆ ಹೂ ಗುಚ್ಛ ಸ್ಮರಣಿಕೆ ನೀಡುವ ಬದಲು ನೋಟ್ ಪುಸ್ತಕ ನೀಡಿ ಇದನ್ನು ಸಂಗ್ರಹಿಸಿ ಶಾಲಾ ಮಕ್ಕಳಿಗೆ ನೀಡುವುದಾಗಿ ತಿಳಿಸಿದ್ದಾರೆ. ಪ್ರತಿದಿನ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ ನೂರಾರು ಖರ್ಚು ಮಾಡಿ ಹೂವು ಹಣ್ಣು ಹಂಪಲು ತಂದು ಫೋಲು ಮಾಡುವ ಬದಲು ಅದರ ಹಣದಲ್ಲಿ ನೋಟ್ ಪುಸ್ತಕ ನನಗೆ ನೀಡಿದರೆ ಶಾಲಾ ಮಕ್ಕಳಿಗೆ ನೆರವು ನೀಡಿದಂತೆ ಆಗುತ್ತದೆ. ಕಾರ್ಯಕ್ರಮ ಸಂಘಟಿಸಿದವರಿಗೆ ನೆರವು ನೀಡಿದ ಸಂತಸವು ಇರುತ್ತದೆ. ಈ ಅಭಿಯಾನ ಒಂದೆರಡು ದಿನಕ್ಕೆ ಸೀಮಿತವಾಗದೆ ಮುಂದುವರಿಯಬೇಕು ಕಾರ್ಯಕರ್ತರು, ಕಾರ್ಯಕ್ರಮ ಆಯೋಜಕರು ಈ ಕುರಿತಾಗಿ ಸಕಾರಾತ್ಮಕವಾಗಿ ಚಿಂತಿಸಿ ಈ ಕೆಲಸದಲ್ಲಿ ನನ್ನೊಂದಿಗೆ ಕೈಜೋಡಿಸಿ ಎಂದು ಸಾರ್ವಜನಿಕರಲ್ಲಿ  ವಿನಂತಿಸಿ ಕೊಂಡಿದ್ದಾರೆ.

ಇನ್ನು ಲೋಕಸಭಾ ಚುನಾವಣೆ  ಪ್ರಚಾರದ ನಿಮಿತ್ತ ನಾನು ಮಂಗಳೂರು ನಗರ ಉತ್ತರ ಕ್ಷೇತ್ರದಲ್ಲಿ ಸಂಚರಿಸಲಿದ್ದೇನೆ. ನಾನು ನಮ್ಮ ಕಾರ್ಯಕರ್ತರಲ್ಲಿ ವಿನಂತಿ ಮಾಡುವುದೇನೆಂದರೆ ನಾನು ಬೆಳಿಗ್ಗೆಯಿಂದ ರಾತ್ರಿ ತನಕ ವಿವಿಧ ವಾರ್ಡ್, ಗ್ರಾಮಗಳಲ್ಲಿ ಬರುವಾಗ ಎಲ್ಲೆಲ್ಲಿ ಕಾರ್ನರ್ ಮೀಟಿಂಗ್, ಸಭೆ, ಮನೆಮನೆ ಪ್ರಚಾರ ನಡೆಯುವ ಏರಿಯಾಗಳಲ್ಲಿ ಒಂದೊಂದು ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಚುನಾವಣಾ ಪ್ರಚಾರ ನಡೆಸೋಣ. ಈ ಮೂಲಕ ನರೇಂದ್ರ ಮೋದಿಜಿಯವರ ಪರಿಸರ ಕಾಳಜಿಗಾಗಿ ತೆಗೆದುಕೊಂಡಿರುವ ನಿರ್ಧಾರಗಳನ್ನು ಬೆಂಬಲಿಸೋಣ. ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಇದನ್ನು ಅನುಷ್ಟಾನಕ್ಕೆ ತರುವಲ್ಲಿ ನನ್ನೊಡನೆ ಕೈಜೋಡಿಸುತ್ತಿರಿ ಎಂದು ಅಂದುಕೊಂಡಿದ್ದೇನೆ ‘ ಇದು ಭರತ್ ಶೆಟ್ಟಿ ಅವರ ಕಳಕಳಿಯ ಮನವಿ. ಎಂದು ಸಾರ್ವಜನಿಕರಲ್ಲಿ  ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ವಿನಂತಿಸಿ ಕೊಂಡಿದ್ದಾರೆ.

Vishwa News 24

Recent Posts

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

33 minutes ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

42 minutes ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

47 minutes ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 hour ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

1 hour ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

21 hours ago