Featured

ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ – vishwanews24

ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಪಣಜಿ: ಹೃದಯಸ್ತಂಭನದಿಂದ  ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್  ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 3 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

79 ವರ್ಷದ ರವಿ ನಾಯ್ಕ್ 2 ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇನ್ನು ರವಿ ನಾಯ್ಕ್ ನಿಧನಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ. ರವಿ ನಾಯ್ಕ್ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ ಎಂದು ಪ್ರಮೋದ್ ಸಾವಂತ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನು ರವಿ ನಾಯ್ಕ್ ನಿಧನಕ್ಕೆ ಪ್ರಧಾನಿ ಮೋದಿ ಕೂಡ ಸಂತಾಪ ಸೂಚಿಸಿದ್ದಾರೆ. ಸಚಿವ ರವಿ ನಾಯ್ಕ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದೀನದಲಿತರ ಸಬಲೀಕರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ರವಿ ನಾಯ್ಕ್, ಗೋವಾದ ಅಭಿವೃದ್ಧಿ ಪಥವನ್ನು ಹೆಚ್ಚು ಶ್ರೀಮಂತಗೊಳಿಸಿದ ಅನುಭವಿ ಆಡಳಿತಗಾರ. ಅಲ್ಲದೇ ಸಾರ್ವಜನಿಕರ ಸೇವೆಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದರು ಎಂದು ಮೋದಿ ಎಕ್ಸ್‌ನಲ್ಲಿ ಉಲ್ಲೇಖಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

6 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

7 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

7 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

8 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

9 hours ago