ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಂಸದ, ಕೆಪಿಸಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಆರ್.ಧ್ರುವನಾರಾಯಣ ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಅವರು ಮೈಸೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.
ಧ್ರುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
ಶನಿವಾರ ಬೆಳಗ್ಗೆ 6.30ರ ವೇಳೆಗೆ ಧ್ರುವನಾರಾಯಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ, ಕೂಡಲೇ ಅವರು ಡ್ರೈವರ್ ಗೆ ಕರೆ ಮಾಡಿದ್ದಾರೆ, ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.
1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು.
2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿ(ಜಾತ್ಯತೀತ) ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧೃವನಾರಾಯಣ ಮೂಲತಃ ವೃತ್ತಿಯಿಂದ ಕೃಷಿಕರು.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…