ಬೆಳಗಾವಿ :ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ಭೂಮಿಕಾ ಮಾಳಂಗಿ ಎಂದು ಗುರುತಿಸಲಾಗಿದೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಇದ್ದ ಕಾರಣ, ಭೂಮಿಕಾ ಬೆಳಗ್ಗೆಯಿಂದಲೇ ಪರೀಕ್ಷೆಗೆ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು.
ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಭೂಮಿಕಾ ಕೊನೆಯುಸಿರೆಳೆದಿದ್ದಾಳೆ.
ಇದನ್ನೂ ಓದಿ:
ಶೈಕ್ಷಣಿಕ ಜೀವನದ ಪ್ರಮುಖ ಪರೀಕ್ಷೆಯನ್ನು ಎದುರಿಸಬೇಕಿದ್ದ ವಿದ್ಯಾರ್ಥಿನಿ, ವಿಧಿಯಾಟಕ್ಕೆ ಬಲಿಯಾಗಿ ಜೀವನದ ಪರೀಕ್ಷೆಯನ್ನೇ ಮುಗಿಸಿರುವುದು ಪೋಷಕರ ಹಾಗೂ ಗ್ರಾಮಸ್ಥರ ಎದೆಯನ್ನು ಭಾರವಾಗಿಸಿದೆ. ಪರೀಕ್ಷೆಯ ಒತ್ತಡ ಅಥವಾ ಆರೋಗ್ಯದ ಏರುಪೇರು ಈ ಸಾವಿಗೆ ಕಾರಣವೇ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ತುಂಬು ವಯಸ್ಸಿನ ಮಗಳ ಅನಿರೀಕ್ಷಿತ ಸಾವಿನಿಂದ ಬಂಬಲವಾಡ ಗ್ರಾಮದಲ್ಲಿ ಶೋಕಮಯ ವಾತಾವರಣ ನಿರ್ಮಾಣವಾಗಿದ್ದು, ಪೋಷಕರ ಕ್ರಂದನ ಮುಗಿಲು ಮುಟ್ಟಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…