ಮಂಡ್ಯ: 3 ದಿನಗಳ ಹಿಂದೆ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.
ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್(28) ಮೃತ ದುರ್ದೈವಿ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿ ಆಗಿದ್ದ ಶಶಾಂಕ್. ಜಾರ್ಖಂಡ್ ಮೂಲದ ಅಷ್ಣಾರ ಎಂಬ ಯುವತಿಯನ್ನು ಪ್ರೀತಿ ಮಾಡುತ್ತಿದ್ದರು. ಈ ವಿಚಾರವನ್ನು ಮನೆಯವರಿಗೆಲ್ಲಾ ತಿಳಿಸಿ, ಒಪ್ಪಿಗೆ ಪಡೆದು ಮಾ.2ರಂದು ಮೈಸೂರಿನ ರೆಸಾರ್ಟ್ವೊಂದರಲ್ಲಿ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು.
ಮದುವೆ ದಿನವೂ ಶಶಾಂಕ್ ಸ್ವಲ್ಪ ಜ್ವರ ಇದೆ ಎಂದು ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. ಮಂಗಳವಾರ ಶಶಾಂಕ್ಗೆ ಬೆಂಗಳೂರಿನ ನಿವಾಸದಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಆತನನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಶಶಾಂಕ್ ಪತ್ನಿ, ತಂದೆ-ತಾಯಿ, ಸ್ನೇಹಿತರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…