ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ಅವರು ನಿಧನರಾಗಿದ್ದಾರೆ. ಮಾಜಿ ಎಂಎಲ್ಸಿ ಎಂಬಿ ಭಾನುಪ್ರಕಾಶ್, ಹೃದಯಾಘಾತದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ ಬಿ ಭಾನುಪ್ರಕಾಶ್ ಬಿಜೆಪಿ ಸಂಘಟನೆಯಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದರು.
ನಗರದ (Shivamogga) ಗೋಪಿ ಸರ್ಕಲ್ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಮತ್ತೂರಿನವರಾದ ಭಾನುಪ್ರಕಾಶ್ ನಳೀನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದ ಸಮಯದಲ್ಲಿ 2019ರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು. ಭಾನುಪ್ರಕಾಶ್ ಬಿಜೆಪಿಯ ಹಿರಿಯ ಮುಖಂಡ. ಸರಳ, ಸಜ್ಜನ ಎಂಬ ಹೆಗ್ಗಳಿಕೆ. ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ಮಿ. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…