ಬಂಟ್ವಾಳ: ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ,
ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಇದೀಗ ಸ್ಥಳೀಯ ಆಸ್ಪತ್ರೆಯಲ್ಲಿರುವ ಮೃತ ದೇಹ ಆರ್.ಕೆ ಭಟ್ಟರ ಮನೆಗೆ ಅಂತಿಮ ದರ್ಶನಕ್ಕೆ ತರಲಾಗುವುದು. ಬಳಿಕ ಆಂಬುಲೆನ್ಸ್ ಮೂಲಕ ಊರಿಗೆ ಸಾಗಲಿದೆ ಎಂದು ಭಾಗವತರಾದ ಗಿರೀಶ್ ರೈ ಕಕ್ಕೆ ಪದವು ತಿಳಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…