ಬೆಂಗಳೂರು: ಹಿರಿಯ ಲೇಖಕಿ ಕಮಲಾ ಹಂಪನ (89) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ಪತಿ ಹಿರಿಯ ಸಾಹಿತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರು, ಹಿತೈಷಿಗಳನ್ನು ಅಗಲಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಪುತ್ರಿ ಡಾ. ಆರತಿ ಮನೆಯಲ್ಲಿ ವಾಸವಿದ್ದರು. ಕಳೆದ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.
ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಮಾಡಲಾಗಿದ್ದು, ಅವರ ದೇಹವನ್ನು ಲೀಲಾವತಿ ಆಸ್ಪತ್ರೆಗೆ ದಾನ ಮಾಡಿದ್ದಾರೆ.
ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ. ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ. ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರಿಗೆ ಕರ್ನಾಟಕ ಸರ್ಕಾರ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಲಭಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…