ಚಿಕ್ಕಮಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಸಾವಿನ ಪ್ರಕರಣಗಳು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದರ ನಡುವೆ ಜಿಲ್ಲೆಯಲ್ಲಿ 29 ವರ್ಷ ಪ್ರಾಯದ ತೆಂಗಿನಕಾಯಿ ವ್ಯಾಪಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ತರೀಕೆರೆ ತಾಲೂಕಿನ ಶಿವನಿ ಗ್ರಾಮದ 29 ವರ್ಷದ ಹರೀಶ್ ಮೃತ ಯುವಕ.
ತೆಂಗಿನಕಾಯಿ ವ್ಯಾಪಾರ ಮಾಡಿಕೊಂಡಿದ್ದ ಹರೀಶ್ ಗುರುವಾರ (ಜು.03) ಬೆಳಗಿನ ಜಾವ 2.30ಕ್ಕೆ ವಾಂತಿ ಮಾಡಿಕೊಂಡಿದ್ದರು. ಗ್ಯಾಸ್ಟ್ರಿಕ್ ಆಗಿರಬಹುದು ಎಂದು ಮನೆಯವರು ಮಾತ್ರೆ ನುಂಗಿಸಿ ಮಲಗಿಸಿದ್ದರು. ಅದರೆ 3.30ಕ್ಕೆ ಮತ್ತೆ ವಾಂತಿಯಾಗಿ ಕುಸಿದು ಬಿದ್ದಿದ್ದರು. ಅಜ್ಜಂಪುರ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಅವಿವಾಹಿತರಾಗಿದ್ದ ಹರೀಶ್ ಅವರು ತೆಂಗಿನಕಾಯಿ ವ್ಯಾಪಾರದ ಜೊತೆ ತೋಟ ನೋಡಿಕೊಳ್ಳುತ್ತಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…