Featured

ಹೃದಯಾಘಾತ : WWE ದಿಗ್ಗಜ ರಸ್ಲರ್ ಹಲ್ಕ್ ಹೋಗಾನ್ ನಿಧನ – vishwanews24

ಹೃದಯಾಘಾತ : WWE ದಿಗ್ಗಜ ರಸ್ಲರ್ ಹಲ್ಕ್ ಹೋಗಾನ್ ನಿಧನ

ಫ್ಲೋರಿಡಾ: ವೃತ್ತಿಪರ ಕುಸ್ತಿ ಸೂಪರ್‌ಸ್ಟಾರ್ ಹಲ್ಕ್ ಹೋಗನ್(71) ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ.

ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE)ನ ಅತಿದೊಡ್ಡ ಸ್ಟಾರ್‌ಗಳಲ್ಲಿ ಒಬ್ಬರಾಗಿದ್ದ ಹೋಗನ್ ಅವರು ತಮ್ಮ ಫ್ಲೋರಿಡಾದ ಮನೆಯಲ್ಲಿ ನಿಧನರಾಗಿರುವುದಾಗಿ ವರದಿಯಾಗಿದೆ. ಹೋಗನ್ ಬಹಳ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಗುರುವಾರ ಬೆಳಿಗ್ಗೆ 9.51 ರ ಸುಮಾರಿಗೆ, ಹಲ್ಕ್ ಹೋಗನ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ವೈದ್ಯಕೀಯ ತಂಡವನ್ನು ಮನೆಗೆ ಕರೆಸಿ, ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

1953 ರ ಆಗಸ್ಟ್ 11ರಂದು ಜಾರ್ಜಿಯಾದ ಆಗಸ್ಟಾದಲ್ಲಿ ಹೋಗನ್ ಜನಿಸಿದರು. ಹೋಗನ್ ಅವರ ನಿಜವಾದ ಹೆಸರು ಟೆರ್ರಿ ಜೀನ್ ಬೊಲಿಯಾ. 1977 ರಲ್ಲಿ ವೃತ್ತಿಪರ ಕುಸ್ತಿ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು, 1983 ರಲ್ಲಿ WWE ಗೆ ಪ್ರವೇಶಿಸುತ್ತಾರೆ. ಹೋಗನ್ ತಮ್ಮ WWE ವೃತ್ತಿಜೀವನದಲ್ಲಿ ಆರು ಬಾರಿ WWE ಚಾಂಪಿಯನ್‌ಶಿಪ್ ಮತ್ತು ಆರು ಬಾರಿ WCW ವರ್ಲ್ಡ್ ಹೆವಿವೇಟ್ ಚಾಂಪಿಯನ್‌ಶಿಪ್ ಗೆದ್ದಿದ್ದಾರೆ. ಅನೇಕ ಪ್ರಸಿದ್ಧ ಕುಸ್ತಿಪಟುಗಳನ್ನು ಸೋಲಿಸುವ ಮೂಲಕ ಹೋಗನ್ ಅವರು 1980 ರ ದಶಕವನ್ನು ಸಂಪೂರ್ಣವಾಗಿ ಆಳಿದರು.

ಮೊದಲ 9 ರೆಸಲ್‌ಮೇನಿಯಾ ಈವೆಂಟ್‌ಗಳಲ್ಲಿ 8 ರಲ್ಲಿ ಹೋಗನ್ ಭಾಗವಹಿಸಿದ್ದರು. 2012 ರ ಜನವರಿಯಲ್ಲಿ ಹೋಗನ್ ಕುಸ್ತಿಯಿಂದ ನಿವೃತ್ತರಾಗುತ್ತಾರೆ. ಅವರು ಅನೇಕ ಹಾಲಿವುಡ್ ಚಲನಚಿತ್ರಗಳಲ್ಲಿ, ರಿಯಾಲಿಟಿ ಶೋಗಳಲ್ಲಿ ಹಾಗೂ ಜಾಹೀರಾತುಗಳಲ್ಲಿ ನಟಿಸಿದ್ದಾರೆ. ಜೊತೆಗೆ 2005 ರಲ್ಲಿ ಹೋಗನ್ ಅವರನ್ನು WWE ಹಾಲ್ ಆಫ್ ಫೇಮ್‌ಗೆ ಸೇರಿಸಲಾಗಿತ್ತು. ಇನ್ನು ಹೋಗನ್ ಅವರ ನಿಧನಕ್ಕೆ ಪ್ರಪಂಚದಾದ್ಯಂತ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

13 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

14 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

14 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

16 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

16 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

16 hours ago