ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಫೋನ್ ಬಳಕೆಯಿಂದ ಬೇಸತ್ತು ಪತಿ ಆತ್ಮಹತ್ಯೆ – vishwanews24

Featured, ರಾಜ್ಯ ನ್ಯೂಸ್

ಹೆಂಡತಿಯ ಶೋಕಿ ಜೀವನ ; ಕಾಟ ತಾಳಲಾರದೆ  ಪತಿ ಆತ್ಮಹತ್ಯೆ

ಬೆಂಗಳೂರು: ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಪೋನ್ ಬಳಕೆಯಿಂದ ಗಂಡ ಬೇಸತ್ತು ಹೋಗಿದ್ದ ಸಾಕಷ್ಟು ಬುದ್ದಿ ಮಾತು ಹೇಳಿದ್ದ ಆತ ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದಲ್ಲಿ ಘಟನೆ ನಡೆದಿದ್ದು. ಲಾರಿ ಚಾಲಕ ಗುಲ್ಜಾರ್ ಹುಸೈನ್ ಚೌಧರಿ ಮೃತ ವ್ಯಕ್ತಿ.

ಪೊಲೀಸ್ ಠಾಣೆ ಮುಂಭಾಗ ತಾಯಿಗೆ ಬೆಂಕಿ ಹಚ್ಚಿದ ಮಗ – vishwanews24

ಅಸ್ಸಾಂ ಮೂಲದ ಈತ ಲಾರಿ ಚಾಲಕ ಮದುವೆ ನಂತರ ತೊಣಚಿನಕುಪ್ಪೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ಮನನೊಂದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರು ಪತ್ನಿ ಶೋಕಿ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ಗುಲ್ಜಾರ್ ಹುಸೈನ್ ಚೌಧರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೇ ವಿವಾಚರವಾಗಿ ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ಕೂಡ ನಡೆದಿದ್ದವು, ಇದರಿಂದ ಮನನೊಂದು ಗುಲ್ಜಾರ್ ಹುಸೈನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಡ್ಡ ಕುಸಿತ : ಜು.22ರ ವರೆಗೆ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ನಿರ್ಬಂಧ – vishwanews24

Leave a Reply