ಮಂಗಳೂರು: ಕರಾವಳಿ, ಮಲೆನಾಡಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಿಯ ಜನರು ಬೀದಿಗೆ ಬಂದಿದ್ದು, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ರಸ್ತೆಗಳನ್ನು ದಾಟುತ್ತಿದ್ದಾರೆ. ಸಂಪಾಜೆಯ ಜೋಡುಪಾಳದಲ್ಲಿ ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ ಪಿಎಸ್ ಐ ಮಂಜುನಾಥ್ ಹೆಗಲ ಮೇಲೆ ಸ್ಥಳೀಯರನ್ನ ಹೊತ್ತೊಯ್ದ ಸುರಕ್ಷಿತ ಸ್ಥಳಕ್ಕೆ ಸಾಗಿಸುತ್ತಿದ್ದಾರೆ.
ಜನರನ್ನು ಒಂದೆಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಮಾರ್ಗ ಮಧ್ಯೆ ಹಗ್ಗ ಕಟ್ಟಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಮಂಜುನಾಥ್ರ ಕೆಲಸ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ರಭಸದಿಂದ ಹರಿಯುತ್ತಿರುವ ನೀರನ್ನು ದಾಟಿಸಲು ಮಂಜುನಾಥ್ ತಮ್ಮ ಭುಜದ ಮೇಲೆ ಹೊತ್ತು ಸಾಗಿಸುತ್ತಿದ್ದಾರೆ.
ಶುಕ್ರವಾರ ಜೋಡುಪಾಳ್ಯದಲ್ಲಿ ನೀರಿನ ಸಮೇತ ಮಣ್ಣು ಸಹ ಕೊಚ್ಚಿಕೊಂಡು ಬರುತ್ತಿತ್ತು. ಈ ವೇಳೆ ಜೋಡುಪಾಳ್ಯದ ಪ್ರವಾಹದಲ್ಲಿ ಸುಮಾರು 180 ಜನರು ಸಿಲುಕಿಕೊಂಡಿದ್ದರು. ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಮಳೆಯಾಗಿದ್ದು, ಮಣ್ಣನ್ನು ಹಿಡಿದಿಟ್ಟುಕೊಳ್ಳಲು ಅಲ್ಲಿ ಮರಗಳು ಇಲ್ಲದ ಕಾರಣ ಜೋಡುಪಾಳ್ಯ ಗ್ರಾಮಕ್ಕೆ ಸಂಪೂರ್ಣ ಮಣ್ಣಿನಿಂದ ಕೊಚ್ಚಿಕೊಂಡು ಹೋಗುತ್ತಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…