ಮಂಗಳೂರು: ಕರಾವಳಿ, ಮಲೆನಾಡಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಿಯ ಜನರು ಬೀದಿಗೆ ಬಂದಿದ್ದು, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ರಸ್ತೆಗಳನ್ನು ದಾಟುತ್ತಿದ್ದಾರೆ. ಸಂಪಾಜೆಯ ಜೋಡುಪಾಳದಲ್ಲಿ ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ ಪಿಎಸ್ ಐ ಮಂಜುನಾಥ್ ಹೆಗಲ ಮೇಲೆ ಸ್ಥಳೀಯರನ್ನ ಹೊತ್ತೊಯ್ದ ಸುರಕ್ಷಿತ ಸ್ಥಳಕ್ಕೆ ಸಾಗಿಸುತ್ತಿದ್ದಾರೆ.
ಜನರನ್ನು ಒಂದೆಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಮಾರ್ಗ ಮಧ್ಯೆ ಹಗ್ಗ ಕಟ್ಟಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಮಂಜುನಾಥ್ರ ಕೆಲಸ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ರಭಸದಿಂದ ಹರಿಯುತ್ತಿರುವ ನೀರನ್ನು ದಾಟಿಸಲು ಮಂಜುನಾಥ್ ತಮ್ಮ ಭುಜದ ಮೇಲೆ ಹೊತ್ತು ಸಾಗಿಸುತ್ತಿದ್ದಾರೆ.
ಶುಕ್ರವಾರ ಜೋಡುಪಾಳ್ಯದಲ್ಲಿ ನೀರಿನ ಸಮೇತ ಮಣ್ಣು ಸಹ ಕೊಚ್ಚಿಕೊಂಡು ಬರುತ್ತಿತ್ತು. ಈ ವೇಳೆ ಜೋಡುಪಾಳ್ಯದ ಪ್ರವಾಹದಲ್ಲಿ ಸುಮಾರು 180 ಜನರು ಸಿಲುಕಿಕೊಂಡಿದ್ದರು. ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಮಳೆಯಾಗಿದ್ದು, ಮಣ್ಣನ್ನು ಹಿಡಿದಿಟ್ಟುಕೊಳ್ಳಲು ಅಲ್ಲಿ ಮರಗಳು ಇಲ್ಲದ ಕಾರಣ ಜೋಡುಪಾಳ್ಯ ಗ್ರಾಮಕ್ಕೆ ಸಂಪೂರ್ಣ ಮಣ್ಣಿನಿಂದ ಕೊಚ್ಚಿಕೊಂಡು ಹೋಗುತ್ತಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…