ವೆಲ್ಲಿಂಗ್ಟಂನ್: ಕೋವಿಡ್ 19 ಸೋಂಕು ಪ್ರಕರಣ ಕ್ಷಿಪ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ದೇಶದ ಪ್ರಜೆಗಳು ಸೇರಿದಂತೆ ಭಾರತದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡಾ ಅರ್ಡೆರ್ನ್ ಗುರುವಾರ (ಏಪ್ರಿಲ್ 08) ಘೋಷಿಸಿದ್ದಾರೆ.
ಈ ಆದೇಶ ಏಪ್ರಿಲ್ 11ರಿಂದ (ಭಾನುವಾರ) ಜಾರಿಯಾಗಲಿದ್ದು, ಏಪ್ರಿಲ್ 28ರವರೆಗೆ ಭಾರತದಿಂದ ಯಾವುದೇ ಪ್ರಯಾಣಿಕರು ನ್ಯೂಜಿಲೆಂಡ್ ಪ್ರವೇಶಿಸುವಂತಿಲ್ಲ ಎಂದು ಜೆಸಿಂಡಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕಠಿಣ ಕ್ರಮ : ಸಿಎಂ ಎಚ್ಚರಿಕೆ -Vishwanews24
ಭಾರತದಿಂದ ಆಗಮಿಸುವ ಪ್ರಯಾಣಿಕರ ಮರು ಆಗಮನಕ್ಕೆ ಸಂಬಂಧಿಸಿದಂತೆ ಕೋವಿಡ್ ಸೋಂಕು ಕುರಿತು ನಿರಂತರವಾಗಿ ಪರಿಶೀಲನೆ ನಡೆಸಿದ ನಂತರ ನಿರ್ಬಂಧವನ್ನು ತೆರವುಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇದೊಂದು ಮುಂಜಾಗ್ರತಾ ಕ್ರಮವಾಗಿದ್ದು, ತಾತ್ಕಾಲಿಕವಾಗಿ ಪ್ರಯಾಣಿಕರ ಆಗಮನಕ್ಕೆ ನಿರ್ಬಂಧ ವಿಧಿಸುವ ಮೂಲಕ ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಪ್ರಧಾನಿ ಅರ್ಡೆರ್ನ್ ತಿಳಿಸಿದ್ದಾರೆ.
ಬಂಟ್ವಾಳ : ಗಾಂಜಾ ಸಾಗಾಟಕ್ಕೆ ಯತ್ನ ; ಓರ್ವ ಆರೋಪಿಯ ಬಂಧನ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…