Featured

ಹೆಚ್ಚಿದ ಒಮಿಕ್ರಾನ್ ಭೀತಿ : ಮುಂಬೈನಲ್ಲಿ 144 ಸೆಕ್ಷನ್ ಜಾರಿ – ಯಾವುದೇ ರೀತಿಯ ರ‍್ಯಾಲಿ, ಮೆರವಣಿಗೆಗೆ ನಡೆಸದಂತೆ ನಿಷೇಧ – Vishwanews24

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 7 ಓಮಿಕ್ರಾನ್  ಪ್ರಕರಣ, ಒಟ್ಟು 17  ಪ್ರಕರಣ..

ಮುಂಬೈನಲ್ಲಿ 144 ಸೆಕ್ಷನ್ ಜಾರಿ – ಯಾವುದೇ ರೀತಿಯ ರ‍್ಯಾಲಿ, ಮೆರವಣಿಗೆಗೆ ನಡೆಸದಂತೆ ನಿಷೇಧ – Vishwanews24

ಮುಂಬೈ: ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಡಿ.11, 12ರಂದು ನಗರದಲ್ಲಿ ಗುಂಪು ಸೇರುವಂತಹ ಯಾವುದೇ ರೀತಿಯ ರ‍್ಯಾಲಿ, ಮೆರವಣಿಗೆ ನಡೆಸದಂತೆ ನಿಷೇಧಿಸಲಾಗಿದೆ.

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಓಮಿಕ್ರಾನ್ ಸೋಂಕಿತ 7 ಪ್ರಕರಣಗಳು ವರದಿಯಾಗಿವೆ. ಆ ಪೈಕಿ 3 ಪ್ರಕರಣಗಳು ಮುಂಬೈನಲ್ಲೇ ವರದಿಯಾಗಿವೆ. ನಗರದಲ್ಲಿ ಓಮಿಕ್ರಾನ್ ಸೋಂಕು ಮತ್ತಷ್ಟು ಹರಡುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಈ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಲ್ಲಿ 3 ವರ್ಷದ ಮಗು ಸೇರಿದಂತೆ ಸೇರಿದಂತೆ 7 ಮಂದಿಯಲ್ಲಿ ಓಮಿಕ್ರಾನ್ ಇರುವುದು ದೃಢಪಟ್ಟಿದೆ. ಸೋಂಕಿತರ ಪೈಕಿ ಮೂವರು ತಾಂಜಾನಿಯಾ, ಯುಕೆ ಮತ್ತು ದಕ್ಷಿಣ ಆಫ್ರಿಕಾದಿಂದ ಪ್ರಯಾಣ ಬೆಳೆಸಿದ್ದವರಾಗಿದ್ದಾರೆ. ನಾಲ್ವರು ಸೋಂಕಿತರು ನೈಜೀರಿಯಾದ ಮಹಿಳೆಯ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ತಿಳಿಸಿದೆ.

ಏಳು ಮಂದಿಯಲ್ಲಿ ನಾಲ್ವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಆದರೆ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಸೋಂಕಿತರ ಪೈಕಿ ನಾಲ್ವರು ಕೋವಿಡ್ ಲಸಿಕೆಯ ಎರಡೂ ಡೋಸ್‍ಗಳನ್ನು ಪಡೆದುಕೊಂಡಿದ್ದಾರೆ. ಓರ್ವ ಒಂದು ಡೋಸ್ ಮಾತ್ರ ಪಡೆದುಕೊಂಡಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಮಗುವಿನಲ್ಲಿ ಓಮಿಕ್ರಾನ್ ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಮಹಾರಾಷ್ಟ್ರದಲ್ಲಿ ಇದುವರೆಗೆ ಒಟ್ಟು 17 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

16 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

16 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

16 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

20 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

20 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

20 hours ago