ಬೆಂಗಳೂರು: ಸಿದ್ದಗಂಗ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಶುಕ್ರವಾರ ಏರ್ ಆಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಯಿತು. ತುಮಕೂರು ಸಮೀಪದ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗ ಮಠದಿಂದ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ರಸ್ತೆಮಾರ್ಗದಲ್ಲಿ ಕರೆತರಲಾಯಿತು.
ಸ್ವಾಮೀಜಿ ಆರೋಗ್ಯ ತಪಾಸಣೆ ನಡೆಸಿದ ಬೆಂಗಳೂರು ಮತ್ತು ಚೆನ್ನೈನ ತಜ್ಞ ವೈದ್ಯರು ಅವರನ್ನು ವಾಯುಮಾರ್ಗದ ಮೂಲಕ ಚೆನ್ನೈಗೆ ಕರೆದೊಯ್ಯುವ ನಿರ್ಧಾರ ತೆಗೆದುಕೊಂಡರು. ಕಳೆದ ಶನಿವಾರವಷ್ಟೇ ಸ್ವಾಮೀಜಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರ ಯಕೃತ್ಗೆ ಸ್ಟಂಟ್ಗಳನ್ನು ಅಳವಡಿಸಲಾಗಿತ್ತು.
2016ರಲ್ಲಿ ಮೊದಲ ಬಾರಿಗೆ ಸ್ಟಂಟ್ ಅಳವಡಿಸಿದ ನಂತರ ಪದೇಪದೆ ಸೋಂಕಿನ ಕಾರಣಕ್ಕೆ ಜ್ವರ ಅವರನ್ನು ಬಾಧಿಸುತ್ತಿತ್ತು. ಸ್ವಾಮೀಜಿಯ ವಯಸ್ಸು ಈಗ 111 ವರ್ಷ. ಅವರಿಗೆ ಹೈಪರ್ಟೆನ್ಷನ್ (ಬಿಪಿ) ಅಥವಾ ಡಯಾಬಿಟಿಸ್ (ಶುಗರ್) ಸಮಸ್ಯೆ ಇಲ್ಲ. ಯಕೃತ್ತಿನ ಸಮಸ್ಯೆಯೊಂದು ಬಹುಕಾಲದಿಂದ ಬಾಧಿಸುತ್ತಿದೆ.
ಸ್ವಾಮೀಜಿ ಶೀಘ್ರ ಗುಣಮುಖರಾಗಬೇಕು ಎಂದು ರಾಜ್ಯದ ವಿವಿಧೆಡೆ ಭಕ್ತರು ಇಷ್ಟದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…