ಬೆಂಗಳೂರು: ಸಿದ್ದಗಂಗ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಶುಕ್ರವಾರ ಏರ್ ಆಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಯಿತು. ತುಮಕೂರು ಸಮೀಪದ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗ ಮಠದಿಂದ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ರಸ್ತೆಮಾರ್ಗದಲ್ಲಿ ಕರೆತರಲಾಯಿತು.
ಸ್ವಾಮೀಜಿ ಆರೋಗ್ಯ ತಪಾಸಣೆ ನಡೆಸಿದ ಬೆಂಗಳೂರು ಮತ್ತು ಚೆನ್ನೈನ ತಜ್ಞ ವೈದ್ಯರು ಅವರನ್ನು ವಾಯುಮಾರ್ಗದ ಮೂಲಕ ಚೆನ್ನೈಗೆ ಕರೆದೊಯ್ಯುವ ನಿರ್ಧಾರ ತೆಗೆದುಕೊಂಡರು. ಕಳೆದ ಶನಿವಾರವಷ್ಟೇ ಸ್ವಾಮೀಜಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರ ಯಕೃತ್ಗೆ ಸ್ಟಂಟ್ಗಳನ್ನು ಅಳವಡಿಸಲಾಗಿತ್ತು.
2016ರಲ್ಲಿ ಮೊದಲ ಬಾರಿಗೆ ಸ್ಟಂಟ್ ಅಳವಡಿಸಿದ ನಂತರ ಪದೇಪದೆ ಸೋಂಕಿನ ಕಾರಣಕ್ಕೆ ಜ್ವರ ಅವರನ್ನು ಬಾಧಿಸುತ್ತಿತ್ತು. ಸ್ವಾಮೀಜಿಯ ವಯಸ್ಸು ಈಗ 111 ವರ್ಷ. ಅವರಿಗೆ ಹೈಪರ್ಟೆನ್ಷನ್ (ಬಿಪಿ) ಅಥವಾ ಡಯಾಬಿಟಿಸ್ (ಶುಗರ್) ಸಮಸ್ಯೆ ಇಲ್ಲ. ಯಕೃತ್ತಿನ ಸಮಸ್ಯೆಯೊಂದು ಬಹುಕಾಲದಿಂದ ಬಾಧಿಸುತ್ತಿದೆ.
ಸ್ವಾಮೀಜಿ ಶೀಘ್ರ ಗುಣಮುಖರಾಗಬೇಕು ಎಂದು ರಾಜ್ಯದ ವಿವಿಧೆಡೆ ಭಕ್ತರು ಇಷ್ಟದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…