Featured

ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಶ್ರೀಗಳು ಏರ್ ಆಂಬುಲೆನ್ಸ್ ನಲ್ಲಿ ಚೆನ್ನೈಗೆ ..

ಬೆಂಗಳೂರು: ಸಿದ್ದಗಂಗ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಶುಕ್ರವಾರ ಏರ್ ಆಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಯಿತು. ತುಮಕೂರು ಸಮೀಪದ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗ ಮಠದಿಂದ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ರಸ್ತೆಮಾರ್ಗದಲ್ಲಿ ಕರೆತರಲಾಯಿತು.

ಸ್ವಾಮೀಜಿ ಆರೋಗ್ಯ ತಪಾಸಣೆ ನಡೆಸಿದ ಬೆಂಗಳೂರು ಮತ್ತು ಚೆನ್ನೈನ ತಜ್ಞ ವೈದ್ಯರು ಅವರನ್ನು ವಾಯುಮಾರ್ಗದ ಮೂಲಕ ಚೆನ್ನೈಗೆ ಕರೆದೊಯ್ಯುವ ನಿರ್ಧಾರ ತೆಗೆದುಕೊಂಡರು. ಕಳೆದ ಶನಿವಾರವಷ್ಟೇ ಸ್ವಾಮೀಜಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರ ಯಕೃತ್‌ಗೆ ಸ್ಟಂಟ್‌ಗಳನ್ನು ಅಳವಡಿಸಲಾಗಿತ್ತು.

2016ರಲ್ಲಿ ಮೊದಲ ಬಾರಿಗೆ ಸ್ಟಂಟ್‌ ಅಳವಡಿಸಿದ ನಂತರ ಪದೇಪದೆ ಸೋಂಕಿನ ಕಾರಣಕ್ಕೆ ಜ್ವರ ಅವರನ್ನು ಬಾಧಿಸುತ್ತಿತ್ತು. ಸ್ವಾಮೀಜಿಯ ವಯಸ್ಸು ಈಗ 111 ವರ್ಷ. ಅವರಿಗೆ ಹೈಪರ್‌ಟೆನ್ಷನ್ (ಬಿಪಿ) ಅಥವಾ ಡಯಾಬಿಟಿಸ್ (ಶುಗರ್) ಸಮಸ್ಯೆ ಇಲ್ಲ. ಯಕೃತ್ತಿನ ಸಮಸ್ಯೆಯೊಂದು ಬಹುಕಾಲದಿಂದ ಬಾಧಿಸುತ್ತಿದೆ.

ಸ್ವಾಮೀಜಿ ಶೀಘ್ರ ಗುಣಮುಖರಾಗಬೇಕು ಎಂದು ರಾಜ್ಯದ ವಿವಿಧೆಡೆ ಭಕ್ತರು ಇಷ್ಟದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

22 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago