ಪಡುಬಿದ್ರಿ: ಕೇಂದ್ರ ಸರಕಾರ ಜಿಲ್ಲಾಡಳಿತಕ್ಕೆ ಎ. 1ರಿಂದ ಹಸ್ತಾಂತರಿಸಿರುವ ಬ್ಲೂ ಫ್ಲ್ಯಾಗ್ ಬೀಚ್ನಲ್ಲಿ ರಾಜ್ಯ ಸರಕಾರದ ಅನುದಾನದೊಂದಿಗೆ ತೇಲುವ ರೆಸ್ಟೋರೆಂಟ್ ಪ್ರಾರಂಭ, ಈಗಿನ 49 ಮಂದಿ ಸಿಬಂದಿ ವರ್ಗವನ್ನು ಉಳಿಸಿಕೊಂಡು ಮುಂದಿನ ಎರಡು ವರ್ಷಗಳಲ್ಲಿ 100 ಮಂದಿಗೆ ಉದ್ಯೋಗ ಸೃಷ್ಟಿ ಯೋಜನೆ, ಹೆಚ್ಚಿನ ಪ್ರವಾಸೀ ಆಕರ್ಷಣೆ ಹಾಗೂ ತೂಗು ಸೇತುವೆ ನಿರ್ಮಾಣದ ಮೂಲಕ ಅಭಿವೃದ್ಧಿಗಳಿಗೆ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಹೇಳಿದರು.
ಅವರು ಎ. 2ರಂದು ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್ನಲ್ಲಿ ಫುಡ್ ಕೋರ್ಟ್, ಪ್ರವಾಸಿ ಆಕರ್ಷಣೆಯ ಕಯಾಕಿಂಗ್, ಬೋಟಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಿದರು. ಕಾಮಿನಿ ಹೊಳೆಯಲ್ಲಿ ಕಯಾಕಿಂಗ್ ವಿಶಿಷ್ಟ ಅನುಭವವನ್ನೂ ಜಿಲ್ಲಾಧಿಕಾರಿ ಪಡೆದರು.
ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ : ಕೆ ಸುಧಾಕರ್ -Vishwanews24
ಜಿಲ್ಲಾಧಿಕಾರಿಗಳೊಂದಿಗೆ ಪ್ರವಾ ಸೋದ್ಯಮ ಇಲಾಖಾ ಉಪ ನಿರ್ದೇಶಕ ಸೋಮಶೇಖರ್, ಬ್ಲೂ ಫ್ಲ್ಯಾಗ್ ಬೀಚ್ ನೋಡಲ್ ಅಧಿಕಾರಿ ಚಂದ್ರಶೇಖರ್ ನಾಯಕ್, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಗಣೇಶ್, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ| ಹರೀಶ್, ಜಿ. ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ, ಉಡುಪಿ ತಾ. ಪಂ. ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಂಸ್ಥೆ (ಆಯಕ್ಟ್)ನ ಅಧ್ಯಕ್ಷ ಮನೋಹರ ಶೆಟ್ಟಿ ಕಾಪು ಹಾಗೂ ಕಾರ್ಯದರ್ಶಿ ಗೌರವ್ ಶೇಣವ, ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು, ಉಪಾಧ್ಯಕ್ಷೆ ಯಶೋದಾ, ಗ್ರಾ. ಪಂ. ಸದಸ್ಯರು, ಮೊಗವೀರ ಮುಂದಾಳು ಸುಕುಮಾರ ಶ್ರೀಯಾನ್ ಮತ್ತಿತರಿದ್ದರು.
ಅಭಿವೃದ್ಧಿಗೆ ಕ್ರಮ
ಇಲ್ಲಿ ಬಾಕಿ ಉಳಿದಿರುವ ತಡೆಗೋಡೆಯನ್ನು 50 ಲಕ್ಷ ರೂ. ಗಳಲ್ಲಿ ಪೂರ್ಣಗೊಳಿಸಬೇಕಿದೆ. ರಸ್ತೆ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಮಿನಿ ಹೊಳೆಗಡ್ಡವಾಗಿ ಸೇತುವೆ ನಿರ್ಮಾಣ, ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲ್ಲಿಂದ ಪಡುಬಿದ್ರಿಯ ಮುಖ್ಯ ಬೀಚ್ವರೆಗೆ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…