ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ : ಸಿ.ಟಿ.ರವಿ -Vishwanews24

Featured, ರಾಜ್ಯ ನ್ಯೂಸ್

ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ : ಸಿ.ಟಿ.ರವಿ -Vishwanews24

ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ನೀತಿಯ ಬಗ್ಗೆ ಚರ್ಚೆ ಆಗುತ್ತಿರುವ ಸಮಯದಲ್ಲೇ ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. ಹೀಗಾಗಿ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ನೀತಿ ಜಾರಿಗೊಳಿಸಬೇಕು ಎಂದು ಸಿ.ಟಿ.ರವಿ ಹೇಳಿದ್ದಾರೆ.