Featured

ಹೆಚ್ಚು ಭಕ್ತಾದಿಗಳು ಬರುವ ರಾಜ್ಯದ ದೇವಾಲಯಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ರಾಮಲಿಂಗಾ ರೆಡ್ಡಿ – vishwanews24

ಹೆಚ್ಚು ಭಕ್ತಾದಿಗಳು ಬರುವ ರಾಜ್ಯದ ದೇವಾಲಯಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಹೆಚ್ಚು ಭಕ್ತಾದಿಗಳು ಬರುವ ರಾಜ್ಯದ ದೇವಾಲಯಗಳ ಅಭಿವೃದ್ಧಿಗಾಗಿ ದೇವಾಲಯಗಳಿಗೆ ಪ್ರಾಧಿಕಾರ ರಚನೆ ಮಾಡುವುದಾಗಿ ಮುಜರಾಯಿ ಸಚಿವರ ರಾಮಲಿಂಗಾ ರೆಡ್ಡಿ  ಘೋಷಣೆ ಮಾಡಿದರು.

ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್‌ನ ರವಿ ಬದಲಿಗೆ ಯುಬಿ ವೆಂಕಟೇಶ್ ಘಾಟಿ ಸುಬ್ರಹ್ಮಣ್ಯ ದೇವಾಲಯದ  ಅಭಿವೃದ್ಧಿ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಸಚಿವರು, ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತದೆ. ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರಾಧಿಕಾರ ನಿರ್ಮಾಣ ಮಾಡುತ್ತೇವೆ. ಪಾರ್ಕಿಂಗ್ ಸಮಸ್ಯೆ ಇದೆ ಎಂದು ಹೇಳಿದ್ದಾರೆ. ಪಾರ್ಕಿಂಗ್ ಅಗತ್ಯ ಸ್ಥಳ ಗುರುತಿಸಲಾಗಿದೆ. ದೇವಾಲಯಕ್ಕೆ 10 ಕೋಟಿ ರೂ. ವಾರ್ಷಿಕ ಆದಾಯ ಬರುತ್ತದೆ. ಹಣದ ಕೊರತೆ ಇಲ್ಲ. ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತೇವೆ ಜೊತೆಗೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರಾಧಿಕಾರ ಮಾಡುತ್ತೇವೆ ಎಂದರು.

ಇದೇ ವೇಳೆ ಮಾತನಾಡಿದ ಸಚಿವರು, ಹೆಚ್ಚು ಭಕ್ತರು ಬರುವ ಎಲ್ಲಾ ದೇವಾಲಯಗಳಿಗೆ ವಿಶೇಷ ಪ್ರಾಧಿಕಾರ ರಚನೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಈ ವಿಚಾರ ಮುಂದಿನ ಕ್ಯಾಬಿನೆಟ್ ಮುಂದೆ ಬರಲಿದೆ. ಕ್ಯಾಬಿನೆಟ್ ನಲ್ಲಿ ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆಗೆ ಒಪ್ಪಿಗೆ ಕೊಡುತ್ತೇವೆ. ಪ್ರಾಧಿಕಾರದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಶಾಸಕರು ಇರಲಿದ್ದು, ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರಗಳು ಅನುಕೂಲ ಆಗಲಿವೆ ಎಂದರು

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

9 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

9 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

10 hours ago