Featured

ಹೆಚ್ಚು ವಿದ್ಯಾರ್ಹತೆ ಹೊಂದಿರದ ಯಾವೊಬ್ಬ ಅಂಗನವಾಡಿ ಕಾರ್ಯಕರ್ತೆಯರನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ – Vishwanews24

ಹೆಚ್ಚು ವಿದ್ಯಾರ್ಹತೆ ಹೊಂದಿರದ ಯಾವೊಬ್ಬ ಅಂಗನವಾಡಿ ಕಾರ್ಯಕರ್ತೆಯರನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ

ವಿಧಾನ ಪರಿಷತ್ತು: ರಾಜ್ಯದ ಅಂಗನವಾಡಿಗಳಲ್ಲೂ “ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಹಾಗಂತ ಹೆಚ್ಚು ವಿದ್ಯಾರ್ಹತೆ ಹೊಂದಿರದ ಯಾವೊಬ್ಬ ಅಂಗನವಾಡಿ ಕಾರ್ಯಕರ್ತೆಯರನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌ ಅಭಯ ನೀಡಿದರು.

ಮಂಗಳವಾರ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ 66,361 ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ 20 ಸಾವಿರಕ್ಕೂ ಅಧಿಕ ಅಂಗನವಾಡಿಗಳಲ್ಲಿನ ಕಾರ್ಯಕರ್ತೆಯರು ಪಿಯುಸಿಗಿಂತ ಹೆಚ್ಚು ವಿದ್ಯಾರ್ಹತೆ ಹೊಂದಿದ್ದಾರೆ. ಮೊದಲ ಹಂತದಲ್ಲಿ ಈ ಅಂಗನವಾಡಿಗಳಲ್ಲಿ ಜಾರಿಗೊಳಿಸಲಾಗುವುದು. ಅದಕ್ಕೂ ಮುನ್ನ ಅಲ್ಲಿ ಕೆಲಸ ಮಾಡುವ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಆರು ತಿಂಗಳ ತರಬೇತಿ ನೀಡಲಾಗುವುದು. ಉಳಿದವರಿಗೆ ಒಂದು ವರ್ಷ ಕೌಶಲ್ಯ ತರಬೇತಿ ಒದಗಿಸಲಾಗುವುದು. ಯಾರೊಬ್ಬರನ್ನೂ ತೆಗೆದುಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನುಮುಂದೆ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ 4,266 ಅಂಗನವಾಡಿ ಕೇಂದ್ರಗಳು ತಲೆಯೆತ್ತಲಿವೆ. ಅಲ್ಲೆಲ್ಲ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಗೆ ಪೂರಕವಾದ ವಿದ್ಯಾರ್ಹತೆ ಹೊಂದಿರುವ ಕಾರ್ಯಕರ್ತೆಯರನ್ನು ತೆಗೆದುಕೊಳ್ಳಲಾಗುವುದು. ಇದರಿಂದ ಅನುಷ್ಠಾನ ಸುಲಭವಾಗಲಿದ್ದು, ಮಕ್ಕಳ ಬೆಳವಣಿಗೆಗೂ ಅನುಕೂಲ ಆಗಲಿದೆ ಎಂದ ಸಚಿವರು, ಎನ್‌ಇಪಿಗೆ ಸಂಬಂಧಿಸಿದಂತೆ ಪಠ್ಯಕ್ರಮ ವಿನ್ಯಾಸ, ಮೌಲ್ಯಮಾಪನ, ಸಮುದಾಯ ಸೇರಿ ಆರು ಸಮಿತಿಗಳನ್ನು ರಚಿಸಲಾಗಿದೆ. ಇದು ವರದಿ ನೀಡಿದ ನಂತರ ಪಠ್ಯಕ್ರಮ ಜಾರಿಗೆ ಬರಲಿದೆ ಎಂದರು.

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago