ಬೆಂಗಳೂರು: ಇದೀಗ ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಹೆಚ್ಡಿಕೆ ಸರ್ಕಾರವನ್ನು ಯಾರು ಕೆಡುವಲು ಸಾಧ್ಯವಿಲ್ಲ. ನಾವು ಒಟ್ಟಾಗಿದ್ದೇವೆ ಹಾಗೂ ಸಮ್ಮಿಶ್ರ ಸರ್ಕಾರ ಭದ್ರವಾಗಿದೆ. ಮಾಧ್ಯಮದವರ ಸಹಕಾರ ಬೇಕು ಅಷ್ಟೆ. ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಉತ್ತಮ ಬಜೆಟ್ ಮಂಡನೆ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಇದೇ ಸಮದರ್ಭದಲ್ಲಿ ಸಾಲಮನ್ನಾದ ಕುರಿತಾಗಿ ಮಾತನಾಡಿದ ಅವರು ಸಾಲಮನ್ನಾಕ್ಕೆ ಈ ವರ್ಷ 10,500 ಕೋಟಿ ಇಟ್ಟಿದ್ದೇವೆ. ಬೆಳೆ ಸಾಲ ಮಾತ್ರ ಈಗ ಮನ್ನಾ ಮಾಡಲಾಗಿದೆ. ಸಾಲಮನ್ನಾವನ್ನು 2 ಲಕ್ಷ ಕ್ಕೆ ನಿಗದಿ ಮಾಡಿದ್ದೇವೆ. ಕೆಲವು ರೈತರ 40-50 ಲಕ್ಷದ ವರೆಗೂ ಸಾಲ ಮಾಡಿದ್ದಾರೆ ಎಂದಿದ್ದಾರೆ. ಅಲ್ಲದೇ ಅಕ್ಕಿಯಲ್ಲಿ ಕಡಿತ ಮಾಡಿದರೂ ಪೌಷ್ಟಿಕಾಂಶದಲ್ಲಿ ಹೆಚ್ಚಳವಾಗಿದೆ. ಈ ಬಜೆಟ್ ಹಳೆಯ ಬಜೆಟ್ನ ಗಾತ್ರ ಹೆಚ್ಚಿಸಿದೆ. ಇದು ಪೂರ್ಣ ಪ್ರಮಾಣದ ಬಜೆಟ್ ಎಂದೂ ತಿಳಿಸಿದ್ದಾರೆ
ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಬಜೆಟ್ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ್ದು, ಕರಾವಳಿ ಭಾಗದ ಜನರಿಗೆ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದಿ ದೂರಿದ್ದಾರೆ. ಇದೀಗ ಬಜೆಟ್ ಮಂಡನೆ ಬಳಿಕ ಸಿಎಂ ಕುಮಾರಸ್ವಾಮಿ ಬಿಜೆಪಿಯವರ ಟೊಳ್ಳು ಮಾತುಗಳನ್ನು ಜನ ನಂಬಬಾರದು, ಸಮ್ಮಿಶ್ರ ಸರ್ಕಾರವಿರುವುದು ನಾಡಿನ ಸಮಗ್ರ ಅಭಿವೃದ್ಧಿಗೆ ಇರುವುದು. ಕಲಾಪದಲ್ಲಿ ಇದಕ್ಕೆಲ್ಲಾ ಉತ್ತರಿಸುತ್ತೇನೆ ಎಂದು ಪ್ರತ್ಯುತ್ತರ ನೀಡಿದ್ದಾರೆ.
ಬಿಜೆಪಿಯವರ ಟೊಳ್ಳು ಮಾತುಗಳನ್ನು ಜನ ನಂಬಬಾರದು, ಸಮ್ಮಿಶ್ರ ಸರ್ಕಾರವಿರುವುದು ನಾಡಿನ ಸಮಗ್ರ ಅಭಿವೃದ್ಧಿಗೆ ಇರುವುದು. ಕಲಾಪದಲ್ಲಿ ಇದಕ್ಕೆಲ್ಲಾ ಉತ್ತರಿಸುತ್ತೇನೆ ಎಂದಿದಸ್ದಾರೆ. ಅಲ್ಲದೇ ಬೆಂಗಳೂರು ನಗರಾಭಿವೃದ್ಧಿಗೆ ಸಮಗ್ರ ಒತ್ತು ನೀಡಿದ್ದೇವೆ. ನೀಡಿದ ಭರವಸೆಗಳ ಪೂರೈಸಲು ಅಧಿಕಾರಿಗಳು ಜೊತೆ ನೀಡಲಿದ್ದಾರೆ. 5 ದಿನಗಳಿಂದ ಅಧಿಕಾರಿಗಳ ನಿದ್ದೆಗೆಡಿಸಿದ್ದೇನೆ.
ಜನರಿಗೆ ಕೊಟ್ಟ ಭರವಸೆ ಈಡೇರಿಸಲು ಅಧಿಕಾರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿದ್ದೇನೆ ಎಂದು ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…