ಮಂಡ್ಯ: ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರಿಗೆ ಯಾವ ಪಕ್ಷದಲ್ಲೂ ಇರೋಕೆ ಆಗಲ್ಲ. ಅವರಿಗೆ ಬೇಕಿರೋದು ಅಧಿಕಾರ ಮತ್ತು ಹಣ. ಅವರೆಡೂ ಸಿಗದಿದ್ದಾಗ ಎಲ್ಲರನ್ನೂ ಬೈಯುತ್ತಾ ಓಡಾಡುತ್ತಾರೆ. ನರಿಗೆ ದ್ರಾಕ್ಷಿ ಎಟಕದೇ ಇರುವಾಗ ಹುಳಿ ಎನ್ನುವುದಿಲ್ಲವೇ ಹಾಗೆ ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಜೆಡಿಎಸ್ನಲ್ಲಿ ಕುಟುಂಬ ರಾಜಕೀಯ ಇದೆ ಅನ್ನೋದು ನಮ್ಮ ಪಕ್ಷದ ಅಭ್ಯರ್ಥಿ ಆಗುವ ಮೊದಲು ಎಚ್. ವಿಶ್ವನಾಥ್ಗೆ ಗೊತ್ತಿರಲಿಲ್ವ. ಇಡೀ ಜೆಡಿಎಸ್ ಪಕ್ಷ ದೇವೇಗೌಡರ ಕುಟುಂಬ. ವಿಶ್ವನಾಥ್ ಮಗ ಜಿ.ಪಂ ಸದಸ್ಯ ಅಲ್ಲವೇ? ಡಿಸಿಸಿ ಬ್ಯಾಂಕ್ ನಿರ್ದೇಶಕ ಅಲ್ಲವೇ? ಅದು ಕುಟುಂಬ ರಾಜಕೀಯ ಅಲ್ಲವೇ? ಇಡೀ ರಾಜ್ಯದಲ್ಲಿ ಯಾರೊಬ್ಬರಿಗೂ ಜೆಡಿಎಸ್ ಅನ್ನು ಕುಟುಂಬ ರಾಜಕಾರಣ ಎಂದು ಹೇಳುವ ನೈತಿಕತೆ ಇಲ್ಲ ಎಂದು ಗುಡುಗಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…