Featured

ಹೆಚ್ ವಿಶ್ವನಾಥ್ ಸಚಿವರಾಗಲು ಸಾಧ್ಯವಿಲ್ಲ : ಹೈಕೋರ್ಟ್ -Vishwanews24

ಹೆಚ್ ವಿಶ್ವನಾಥ್ ಸಚಿವರಾಗಲು ಸಾಧ್ಯವಿಲ್ಲ : ಹೈಕೋರ್ಟ್ -Vishwanews24

ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಎ.ಎಚ್‌.ವಿಶ್ವನಾಥ್‌‌‌‌‌ ಅವರಿಗೆ ಹೈಕೋರ್ಟ್ ಆಘಾತ ನೀಡಿದ್ದು, “ಚುನಾವಣೆಯಲ್ಲಿ ಸೋತು, ವಿಧಾನಪರಿಷತ್‌‌‌‌‌‌‌ಗೆ ನಿರ್ದೇಶನಗೊಂಡು ಸದಸ್ಯರಾದ ಕಾರಣ ಅವರಿಗೆ ಸಚಿವರಾಗಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ತಿಳಿಸಿದೆ.

ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗಿಯ ಪೀಠವು, ಹೆಚ್ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಅನರ್ಹರಾಗಿ, ಸೋತು ನಾಮನಿರ್ದೇಶನಗೊಂಡಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು. ಕಲಂ 164(1ಬಿ), 361 ಬಿ ಅಡಿ ವಿಶ್ವನಾಥ್ ಅನರ್ಹರು. ಹೀಗಾಗಿ 2021ರವರೆಗೆ ಸಚಿವರಾಗಲು ಅರ್ಹರಲ್ಲ ಎಂಬುದಾಗಿ ಮಹತ್ವದ ಆದೇಶ ನೀಡಿದೆ.

ಇನ್ನೂ ಆರ್.ಶಂಕರ್, ಎಂ.ಟಿ.ಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂ.ಎಲ್ ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ. ಆದ್ರೇ ಹೆಚ್ ವಿಶ್ವನಾಥ್ ನಾಮ ನಿರ್ದೇಶನಗೊಂಡಿರೋದು. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಅನರ್ಹರಾಗಿದ್ದಾರೆ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠವು ಅಭಿಪ್ರಾಯ ಪಟ್ಟಿದೆ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಗೆ ಬಿಗ್ ಶಾಕ್ ನೀಡಿದ್ದರೇ, ಆರ್ ಶಂಕರ್, ಎಂಟಿಬಿ ನಾಗರಾಜ್ ಗೆ ಬಿಗ್ ರಿಲೀಫ್ ನೀಡಿದೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

8 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

13 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

14 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

14 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

14 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

15 hours ago