ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಎ.ಎಚ್.ವಿಶ್ವನಾಥ್ ಅವರಿಗೆ ಹೈಕೋರ್ಟ್ ಆಘಾತ ನೀಡಿದ್ದು, “ಚುನಾವಣೆಯಲ್ಲಿ ಸೋತು, ವಿಧಾನಪರಿಷತ್ಗೆ ನಿರ್ದೇಶನಗೊಂಡು ಸದಸ್ಯರಾದ ಕಾರಣ ಅವರಿಗೆ ಸಚಿವರಾಗಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ತಿಳಿಸಿದೆ.
ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗಿಯ ಪೀಠವು, ಹೆಚ್ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಅನರ್ಹರಾಗಿ, ಸೋತು ನಾಮನಿರ್ದೇಶನಗೊಂಡಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು. ಕಲಂ 164(1ಬಿ), 361 ಬಿ ಅಡಿ ವಿಶ್ವನಾಥ್ ಅನರ್ಹರು. ಹೀಗಾಗಿ 2021ರವರೆಗೆ ಸಚಿವರಾಗಲು ಅರ್ಹರಲ್ಲ ಎಂಬುದಾಗಿ ಮಹತ್ವದ ಆದೇಶ ನೀಡಿದೆ.
ಇನ್ನೂ ಆರ್.ಶಂಕರ್, ಎಂ.ಟಿ.ಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂ.ಎಲ್ ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ. ಆದ್ರೇ ಹೆಚ್ ವಿಶ್ವನಾಥ್ ನಾಮ ನಿರ್ದೇಶನಗೊಂಡಿರೋದು. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಅನರ್ಹರಾಗಿದ್ದಾರೆ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠವು ಅಭಿಪ್ರಾಯ ಪಟ್ಟಿದೆ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಗೆ ಬಿಗ್ ಶಾಕ್ ನೀಡಿದ್ದರೇ, ಆರ್ ಶಂಕರ್, ಎಂಟಿಬಿ ನಾಗರಾಜ್ ಗೆ ಬಿಗ್ ರಿಲೀಫ್ ನೀಡಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…