ಪಡುಬಿದ್ರಿ: ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಜಮಾಡಿ ಅಳಿವೆ ಬಾಗಿಲಿನಲ್ಲಿ ನಡೆದಿದೆ.
ಹೆಜಮಾಡಿ ಕೋಡಿ ಮಾನಂಪಾಡಿಯ ಜಯಂತ ಶ್ರೀಯಾನ್ (45) ಮೃತಪಟ್ಟವರಾಗಿದ್ದು, ಇವರು ಇಂದು ಮುಂಜಾವ ಅಳಿವೆ ಬಾಗಿಲು( ನದಿ ಕಡಲು ಸೇರುವ ಸಂಗಮ ಸ್ಥಳ) ಸಮೀಪ ಮೀನುಗಾರಿಕೆಯಲ್ಲಿ ನಿರತರಾಗಿದ್ದರು. ಈ ವೇಳೆ ಏಕಾಏಕಿ ಮೇಲೆದ್ದ ಬೃಹತ್ ಅಲೆ ಮೀನುಗಾರನಿಗೆ ಅಪ್ಪಳಿಸಿದೆ. ಅಲೆಯ ಘಾತಕ ಪ್ರಹಾರದಿಂದಾಗಿ ಮೀನುಗಾರ ದೋಣಿಯಿಂದ ನೀರಿಗೆ ಬಿದ್ದಿದ್ದು, ಈಜಲೂ ಸಾಧ್ಯವಾಗದೆ ದಾರುಣವಾಗಿ ಮೃತಪಟ್ಟಿದ್ದಾರೆ.
ಜಯಂತ್ ಅವರಿಗೆ ಪತ್ನಿ ಹಾಗೂ 4 ಮಕ್ಕಳಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಎಸ್ ಐ ದಿಲೀಪ್, ಹೆಜಮಾಡಿ ಗ್ರಾಪಂ ಅಧ್ಯಕ್ಷ ಪ್ರಾಣೇಶ್ ಹೆಜಮಾಡಿ, ಸದಸ್ಯ ಶರಣ್ ಕುಮಾರ್ ಮಟ್ಟು ಮತ್ತಿತರರು ಭೇಟಿ ನೀಡಿದರು. ಮೃತದೇಹವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…