ಪಡುಬಿದ್ರಿ: ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.11) ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.
ಮೃತರನ್ನು ಜೀವನ ನಿರ್ವಹಣೆಗೆ ಪಡುಬಿದ್ರಿಯತ್ತ ಪಿಕಪ್ ಗೂಡ್ಸ್ ವಾಹನ ಹತ್ತಿ ಹೊರಟಿದ್ದ ಲಿಂಗಪ್ಪಯ್ಯ ಕಾಡು ನಿವಾಸಿ ಸಾವಿತ್ರಿ ಎಂದು ಗುರುತಿಸಲಾಗಿದೆ.
ಹೆಜಮಾಡಿ ಟೋಲ್ ಗೇಟ್ ಸಮೀಪ ವಾಹನ ಪಲ್ಟಿಯಾದಾಗ ಅದರಲ್ಲಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರವು ನತದೃಷ್ಟೆ ಸಾವಿತ್ರಿ ಅವರನ್ನು ಯಮನಾಗಿ ಕಾಡಿತ್ತು. ಯಂತ್ರದೆಡೆಗೆ ಸಿಲುಕಿ ತೀವ್ರ ಗಾಯಗೊಂಡ ಅವರನ್ನು ಅಸ್ಪತ್ರೆಗೆ ಒಯ್ಯುವಾಗಲೇ ಸಾವನ್ನಪ್ಪಿದ್ದರು. ಗಾಯಗೊಂಡಿರುವ ಇತರ ಆರು ಮಂದಿಯನ್ನು ಚಿಕಿತ್ಸೆಗಾಗಿ ಅಸ್ಪತ್ರೆಗೆ ಒಯ್ಯಲಾಗಿದೆ.
ದಿನಂಪ್ರತಿ ಇದೇ ವಾಹನದಲ್ಲಿ ಕಾರ್ಮಿಕರನ್ನು ವಿವಿದೆಡೆಯ ಕಾಮಗಾರಿ ಸ್ಥಳಕ್ಕೆ ಮೂಲ್ಕಿಯ ಲಿಂಗಪ್ಪಯ್ಯ ಕಾಡಿನಿಂದ ಒಟ್ಟು ಸೇರಿಸಿ ಕರೆದೊಯ್ಯಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…