ಪಡುಬಿದ್ರಿ: ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.11) ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.
ಮೃತರನ್ನು ಜೀವನ ನಿರ್ವಹಣೆಗೆ ಪಡುಬಿದ್ರಿಯತ್ತ ಪಿಕಪ್ ಗೂಡ್ಸ್ ವಾಹನ ಹತ್ತಿ ಹೊರಟಿದ್ದ ಲಿಂಗಪ್ಪಯ್ಯ ಕಾಡು ನಿವಾಸಿ ಸಾವಿತ್ರಿ ಎಂದು ಗುರುತಿಸಲಾಗಿದೆ.
ಹೆಜಮಾಡಿ ಟೋಲ್ ಗೇಟ್ ಸಮೀಪ ವಾಹನ ಪಲ್ಟಿಯಾದಾಗ ಅದರಲ್ಲಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರವು ನತದೃಷ್ಟೆ ಸಾವಿತ್ರಿ ಅವರನ್ನು ಯಮನಾಗಿ ಕಾಡಿತ್ತು. ಯಂತ್ರದೆಡೆಗೆ ಸಿಲುಕಿ ತೀವ್ರ ಗಾಯಗೊಂಡ ಅವರನ್ನು ಅಸ್ಪತ್ರೆಗೆ ಒಯ್ಯುವಾಗಲೇ ಸಾವನ್ನಪ್ಪಿದ್ದರು. ಗಾಯಗೊಂಡಿರುವ ಇತರ ಆರು ಮಂದಿಯನ್ನು ಚಿಕಿತ್ಸೆಗಾಗಿ ಅಸ್ಪತ್ರೆಗೆ ಒಯ್ಯಲಾಗಿದೆ.
ದಿನಂಪ್ರತಿ ಇದೇ ವಾಹನದಲ್ಲಿ ಕಾರ್ಮಿಕರನ್ನು ವಿವಿದೆಡೆಯ ಕಾಮಗಾರಿ ಸ್ಥಳಕ್ಕೆ ಮೂಲ್ಕಿಯ ಲಿಂಗಪ್ಪಯ್ಯ ಕಾಡಿನಿಂದ ಒಟ್ಟು ಸೇರಿಸಿ ಕರೆದೊಯ್ಯಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…