Featured

ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯ ವಾಹನಗಳ ಆರ್‌. ಸಿ. ಪ್ರತಿ ಒದಗಿಸಲು ಆ.31 ಅಂತಿಮ ದಿನ – vishwanews24

ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯ ವಾಹನಗಳ ಆರ್‌. ಸಿ. ಪ್ರತಿ ಒದಗಿಸಲು ಆ.31 ಅಂತಿಮ ದಿನ

ಪಡುಬಿದ್ರಿ: ಹೆಜಮಾಡಿಯ ಕೆ. ಕೆ. ಆರ್‌. ಟೋಲ್‌ ಪ್ಲಾಝಾದಲ್ಲಿ ವಿನಾಯಿತಿ ಹೊಂದಿರುವ ಸ್ಥಳೀಯ ವಾಹನಗಳ ಮಾಲಕರು ವಾಹನದ ಆರ್‌. ಸಿ. ಪ್ರತಿ ಸಲ್ಲಿಸಲು ಆ. 31 ಅಂತಿಮ ದಿನವಾಗಿದೆ.

ಆ. 6ರಂದು ಬಂಟ್ವಾಳದ ಯುವಕನೊಬ್ಬ ದಾಂಧಲೆ ನಡೆಸಿದ ಘಟನೆ ಬಳಿಕ ಟೋಲ್‌ ಮುಖ್ಯಸ್ಥರು ವಿನಾಯಿತಿ ಹೊಂದಿದ ಸ್ಥಳೀಯ ವಾಹನಗಳ ದಾಖಲೆ ಸಂಗ್ರಹಕ್ಕೆ ಮುಂದಾಗಿದ್ದರು. ಈ ಸಂದರ್ಭ ಜುಲೈ„ ತಿಂಗಳೊಂದರಲ್ಲೆ 2000ಕ್ಕೂ ಅಧಿಕ ಹೊಸ ಸ್ಥಳೀಯ ವಾಹನಗಳು ಟೋಲ್‌ ವಿನಾಯಿತಿ ಪಡೆದ ಮಾಹಿತಿ ಲಭ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ಸಂಪೂರ್ಣ ಟೋಲ್‌ ವಿನಾಯಿತಿ ಹೊಂದಿರುವ ಸ್ಥಳೀಯ ವಾಹನಗಳು ತಮ್ಮ ಆರ್‌. ಸಿ. ಪ್ರತಿಯೊಂದನ್ನು ಟೋಲ್‌ ಕಛೇರಿಯಲ್ಲಿ ಆ. 10ರೊಳಗೆ ನೀಡುವಂತೆ ಬ್ಯಾನರ್‌ ಮೂಲಕ ಮಾಹಿತಿ ನೀಡಿತ್ತು.
ಈ ಬಗ್ಗೆ ಸ್ಥಳೀಯರೆಲ್ಲರಿಗೂ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಆ. 9 ಶುಕ್ರವಾರ ಸಂಜೆ ಟೋಲ್‌ ವಿರೋಧಿ ಹೋರಾಟ ಸಮಿತಿಯು ಅಧ್ಯಕ್ಷ ಶೇಖರ್‌ ಹೆಜ್ಮಾಡಿ ನೇತೃತ್ವದಲ್ಲಿ ಟೋಲ್‌ ಮ್ಯಾನೇಜರ್‌ ತಿಮ್ಮಯ್ಯ ಎ. ಎಸ್‌.
ಈ ಸಂದರ್ಭ ಮಾತನಾಡಿದ ತಿಮ್ಮಯ್ಯ ಅವರು, ಜಿಲ್ಲಾಡಳಿತ ತಿಳಿಸಿದಂತೆ ಹಿಂದಿನಂತೆ ಸ್ಥಳೀಯ ವಾಹನಗಳಿಗೆ ವಿನಾಯಿತಿ ನೀಡಲು ನಮ್ಮ ಸಂಸ್ಥೆ ಬದ್ಧವಾಗಿದೆ. ಅದರೆ ಹೆಜಮಾಡಿ ಗ್ರಾಮವೊಂದರಲ್ಲೇ 2000ಕ್ಕೂ ಹೊಸ ವಾಹನಗಳು ಜುಲೈ ತಿಂಗಳಲ್ಲಿ ಟೋಲ್‌ನಲ್ಲಿ ಸಂಚರಿಸಿದೆ. ಈ ಪೈಕಿ ಹೆಚ್ಚು ನಕಲಿ ದಾಖಲೆಗಳಾಗಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ವಾಹನಗಳು ಆರ್‌. ಸಿ. ಪ್ರತಿ ಒದಗಿಸಿದರೆ ಕಂಪ್ಯೂಟರ್‌ ಮೂಲಕ ದಾಖಲೆ ಸಂಗ್ರಹಿಸಿ ಅರ್ಹರಿಗೆ ವಿನಾಯಿತಿ ನೀಡಲು ಸಾಧ್ಯವಾಗುತ್ತದೆ. ಹಾಗಾಗಿ ಸಮಿತಿಯ ಬೇಡಿಕೆ ಹಿನ್ನೆಲೆಯಲ್ಲಿ ದಾಖಲೆ ಪ್ರತಿ ಒದಗಿಸಲು ಆ. 31ರವರೆಗೆ ಅವಕಾಶ ಕಲ್ಪಿಸಲಾಗುವುದು ಎಂದವರು ಹೇಳಿದರು.

 

ಈ ಸಂದರ್ಭ ಟೋಲ್‌ ಪ್ಲಾಝಾದಲ್ಲಿ ಸ್ಥಳೀಯ ನೌಕರರ ಬಗ್ಗೆ ಶೇಖರ್‌ ಹೆಜಮಾಡಿ ಮೌಖೀಕ ಮನವಿ ಸಲ್ಲಿಸಿ ಸ್ಥಳೀಯರಿಗೆ ಉದ್ಯೋಗ ನೀಡುವ ಜತೆಗೆ ಭದ್ರತೆಯನ್ನೂ ಒದಗಿಸುವಂತೆ ವಿನಂತಿಸಿದರು.
ಸಮಿತಿಯ ಪದಾಧಿಕಾರಿಗಳಾದ ಪಾಂಡುರಂಗ ಕರ್ಕೇರ, ಮಧು ಅಚಾರ್ಯ ಮೂಲ್ಕಿ, ಸುಧೀರ್‌ ಕರ್ಕೇರ, ತೇಜಪಾಲ್‌ ಸುವರ್ಣ, ಸಂತೋಷ್‌ ಪಡುಬಿದ್ರಿ, ರಮೀಝ್ ಹುಸೈನ್‌, ಖಾದರ್‌ ಹೆಜ್ಮಾಡಿ, ಪ್ರಾಣೇಶ್‌ ಹೆಜ್ಮಾಡಿ, ವಿಕ್ರಮ್‌ರಾಜ್‌ ಸುವರ್ಣ, ಅಹಮ್ಮದ್‌ ಕಬೀರ್‌, ಅಬ್ದುಲ್‌ ರೆಹ್ಮಾನ್‌, ಹನೀಫ್‌ ಕನ್ನಂಗಾರ್‌, ಕಾಸಿಮ್‌ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago