Featured

ಹೆಜಮಾಡಿ ಟೋಲ್‌ ಅಲ್ಲಿ ದುಪ್ಪಟ್ಟು ಸುಲಿಗೆ – ನಳಿನ್ ಕಾರು ಅಲ್ಲಾಡಿಸಿದ್ದಕ್ಕೆ ಬಹಿರಂಗವಾಗಿ ಕರಾವಳಿಗರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ : ಹರಿಪ್ರಸಾದ್  – Vishwanews24

ಹೆಜಮಾಡಿ ಟೋಲ್‌ ಅಲ್ಲಿ ದುಪ್ಪಟ್ಟು ಸುಲಿಗೆ – ನಳಿನ್ ಕಾರು ಅಲ್ಲಾಡಿಸಿದ್ದಕ್ಕೆ ಬಹಿರಂಗವಾಗಿ ಕರಾವಳಿಗರ ವಿರುದ್ಧ ಸೇಡು: ಹರಿಪ್ರಸಾದ್

ಬೆಂಗಳೂರು: ಸುರತ್ಕಲ್ ಟೋಲ್ ಗೇಟ್ ರದ್ದು ಮಾಡಿ ಹೆಜಮಾಡಿ ಟೋಲ್ ನಲ್ಲಿ ಹೆಚ್ಚಿನ ಹಣ ಸಂಗ್ರಹ ಮಾಡುವ ನಿರ್ಧಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಟೀಕೆ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾರು ಅಲುಗಾಡಿಸಿದ್ದಕ್ಕೆ ಕರಾವಳಿಗರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಕರಾವಳಿ ಸಂಸದರು ಯಾವ ಪುರುಷಾರ್ಥಕ್ಕೆ ಸ್ವಯಂ ಬೆನ್ನುತಟ್ಟಿಕೊಂಡಿದ್ದು ಬಹಿರಂಗ ಪಡಿಸಬೇಕು. ವಾಹನ ಸವಾರರ ಬೆವರಿನ ಹಣವನ್ನ ಜಿಗಣೆಯಂತೆ ರಕ್ತ ಹೀರುತ್ತಿದ್ದ ಸುರತ್ಕಲ್ ಟೋಲ್‌ ಗೇಟ್‌ ರದ್ದು ಪಡಿಸಿ, ಹೆಜಮಾಡಿ ಟೋಲ್‌ ಅಲ್ಲಿ ದುಪ್ಪಟ್ಟು ಸುಲಿಗೆ ಮಾಡಲು ವಿಲೀನಗೊಳಿಸಿದ್ದಕ್ಕಾ ಎಂದು ಪ್ರಶ್ನಿಸಿದ್ದಾರೆ.

ಅಕ್ರಮ ಟೋಲ್‌ಗೇಟ್‌ ತೆರವುಗೊಳಿಸಲು ಕರಾವಳಿಯಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದ್ದರೆ ತಾವು ಉಳಿಸಲು ಶಕ್ತಿಮೀರಿ ಶ್ರಮಿಸಿರುವ ತೆರೆ ಮರೆಯ ಕಸರತ್ತನ್ನ ಬಹಿರಂಗಪಡಿಸುತ್ತಿರಾ? ಅಥವಾ ಕಾರು ಅಲ್ಲಾಡಿಸಿದ ಕಾರಣಕ್ಕೆ ಬಹಿರಂಗವಾಗಿ ಕರಾವಳಿಗರ ಮೇಲೆ ಸೇಡು ತೀರಿಸಿಕೊಂಡಿದ್ದನ್ನ ಒಪ್ಪಿಕೊಳ್ಳುತ್ತಿರಾ ಎಂದು ಸವಾಲೆಸಿದಿದ್ದಾರೆ.

ಕರಾವಳಿಯ ಬಿಜೆಪಿ ಸಂಸದರು,ಶಾಸಕರು ಟೋಲ್‌ಗೇಟ್‌ ಗಳ ಪರ ವಕಾಲತ್ತು ವಹಿಸುತ್ತಿರುವುದು ಯಾಕೆ? ಸುಲಿಗೆ ಮಾಡುತ್ತಿರುವ ಹಣದಲ್ಲಿ ತಮ್ಮ ಪಾಲೆಷ್ಟು ಬಹಿರಂಗಪಡಿಸಿ? ಮತಕೊಟ್ಟ ಜನರಿಗೆ ದ್ರೋಹ ಮಾಡಿ, ಬೆನ್ನ ತಟ್ಟಿಕೊಂಡಿರುವ ಸಂಸದರದ್ದು ಲಜ್ಜೆಗೆಟ್ಟ ಪರಮಾವಧಿ. ಅಕ್ರಮ ಟೋಲ್ ಅಂತೆ ನಿಮ್ಮನ್ನ ಎತ್ತಂಗಡಿ ಮಾಡುವ ಕಾಲ ಬಂದಾಯ್ತು‌ ಎಂದು ಬಿಕೆ ಹರಿಪ್ರಸಾದ್ ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago