ಬೆಂಗಳೂರು: ಸುರತ್ಕಲ್ ಟೋಲ್ ಗೇಟ್ ರದ್ದು ಮಾಡಿ ಹೆಜಮಾಡಿ ಟೋಲ್ ನಲ್ಲಿ ಹೆಚ್ಚಿನ ಹಣ ಸಂಗ್ರಹ ಮಾಡುವ ನಿರ್ಧಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಟೀಕೆ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾರು ಅಲುಗಾಡಿಸಿದ್ದಕ್ಕೆ ಕರಾವಳಿಗರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಕರಾವಳಿ ಸಂಸದರು ಯಾವ ಪುರುಷಾರ್ಥಕ್ಕೆ ಸ್ವಯಂ ಬೆನ್ನುತಟ್ಟಿಕೊಂಡಿದ್ದು ಬಹಿರಂಗ ಪಡಿಸಬೇಕು. ವಾಹನ ಸವಾರರ ಬೆವರಿನ ಹಣವನ್ನ ಜಿಗಣೆಯಂತೆ ರಕ್ತ ಹೀರುತ್ತಿದ್ದ ಸುರತ್ಕಲ್ ಟೋಲ್ ಗೇಟ್ ರದ್ದು ಪಡಿಸಿ, ಹೆಜಮಾಡಿ ಟೋಲ್ ಅಲ್ಲಿ ದುಪ್ಪಟ್ಟು ಸುಲಿಗೆ ಮಾಡಲು ವಿಲೀನಗೊಳಿಸಿದ್ದಕ್ಕಾ ಎಂದು ಪ್ರಶ್ನಿಸಿದ್ದಾರೆ.
ಅಕ್ರಮ ಟೋಲ್ಗೇಟ್ ತೆರವುಗೊಳಿಸಲು ಕರಾವಳಿಯಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದ್ದರೆ ತಾವು ಉಳಿಸಲು ಶಕ್ತಿಮೀರಿ ಶ್ರಮಿಸಿರುವ ತೆರೆ ಮರೆಯ ಕಸರತ್ತನ್ನ ಬಹಿರಂಗಪಡಿಸುತ್ತಿರಾ? ಅಥವಾ ಕಾರು ಅಲ್ಲಾಡಿಸಿದ ಕಾರಣಕ್ಕೆ ಬಹಿರಂಗವಾಗಿ ಕರಾವಳಿಗರ ಮೇಲೆ ಸೇಡು ತೀರಿಸಿಕೊಂಡಿದ್ದನ್ನ ಒಪ್ಪಿಕೊಳ್ಳುತ್ತಿರಾ ಎಂದು ಸವಾಲೆಸಿದಿದ್ದಾರೆ.
ಕರಾವಳಿಯ ಬಿಜೆಪಿ ಸಂಸದರು,ಶಾಸಕರು ಟೋಲ್ಗೇಟ್ ಗಳ ಪರ ವಕಾಲತ್ತು ವಹಿಸುತ್ತಿರುವುದು ಯಾಕೆ? ಸುಲಿಗೆ ಮಾಡುತ್ತಿರುವ ಹಣದಲ್ಲಿ ತಮ್ಮ ಪಾಲೆಷ್ಟು ಬಹಿರಂಗಪಡಿಸಿ? ಮತಕೊಟ್ಟ ಜನರಿಗೆ ದ್ರೋಹ ಮಾಡಿ, ಬೆನ್ನ ತಟ್ಟಿಕೊಂಡಿರುವ ಸಂಸದರದ್ದು ಲಜ್ಜೆಗೆಟ್ಟ ಪರಮಾವಧಿ. ಅಕ್ರಮ ಟೋಲ್ ಅಂತೆ ನಿಮ್ಮನ್ನ ಎತ್ತಂಗಡಿ ಮಾಡುವ ಕಾಲ ಬಂದಾಯ್ತು ಎಂದು ಬಿಕೆ ಹರಿಪ್ರಸಾದ್ ಟ್ವೀಟ್ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…