Featured

ಹೆಜಮಾಡಿ ಟೋಲ್ – ಉಡುಪಿ ಜಿಲ್ಲೆಯ ಎಲ್ಲಾ ವಾಹನಗಳಿಗೆ ಉಚಿತ ಪ್ರವೇಶಕ್ಕೆ ಪ್ರಸ್ತಾಪ : ಸಚಿವ ವಿ. ಸುನೀಲ್ ಕುಮಾರ್ – Vishwanews24

ಉಡುಪಿ ಜಿಲ್ಲೆಯ ಎಲ್ಲಾ ವಾಹನಗಳಿಗೆ ಉಚಿತ ಪ್ರವೇಶ ಅದಕ್ಕಾಗಿ ಪ್ರತ್ಯೇಕ ಮಾರ್ಗಕ್ಕೆ ಪ್ರಸ್ತಾಪ

ಸಮಸ್ಯೆ ಪರಿಹಾರ ಆಗುವವರೆಗೆ ಹೆಜಮಾಡಿಯಲ್ಲಿ ಹೊಸ ಸುಂಕವನ್ನು ಸಂಗ್ರಹ ಮಾಡಬಾರದು ಎಂದು ನಿರ್ಧಾರ

ಉಡುಪಿ: ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿಯಲ್ಲಿ ಸಂಗ್ರಹಿಸಲು ನೀಡಿರುವ ಆದೇಶದ ಬಗ್ಗೆ ಇಂದು ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ನೇತೃತ್ವದಲ್ಲಿ ಉಡುಪಿ ತಾಲೂಕು ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿಗೆ ವರ್ಗಾಯಿಸಿದೂದರ ಸಾದಕ ಭಾದಕಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಅವರು ಆನ್ಲೈನ್ ಮುಲಕ ಭಾಗವಹಿಸಿದರು. ಹಾಗೂ ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಉಪಸ್ಥಿತರಿದ್ದರು.

ಸಭೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅವರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಂದಾಗಿ ಅವೈಜ್ಞಾನಿಕವಾದ ವ್ಯವಸ್ಥೆ ಜಾರಿ ಆಗಿದೆ. ಈ ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದೇವೆ ಎಂದರು.

ಹಾಗೂ ಹೆಜಮಾಡಿಯಲ್ಲಿ ಹೆಚ್ಚುವರಿ ಸುಂಕ ಪಡೆಯಬಾರದು ಮತ್ತು ಕೆ.20 ನೋಂದಣಿಯ ಉಡುಪಿ ಜಿಲ್ಲೆಯ ಎಲ್ಲಾ ವಾಹನಗಳಿಗೆ ಉಚಿತ ಪ್ರವೇಶದ ರಿಯಾಯ್ತಿ ನೀಡಬೇಕು. ಅದಕ್ಕಾಗಿ ಜಿಲ್ಲೆಯ ವಾಹನಗಳಿಗೆ ಪ್ರತ್ಯೇಕ ಮಾರ್ಗ ನೀಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಎರಡು ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು

ಹೆಜಮಾಡಿಯಲ್ಲಿ ಹೆಚ್ಚುವರಿ ಸುಂಕ ಸಂಗ್ರಹ ಮಾಡದೆ ಈ ಹಿಂದೆ ಹೆಜಮಾಡಿಯಲ್ಲಿ ಸಂಗ್ರಹವಾಗುತ್ತಿದ್ದ ಸುಂಕವನ್ನೇ ಪಡೆಯಬೇಕು
ಮತ್ತು ಸುರತ್ಕಲ್ ಸುಂಕವನ್ನು ಹೆಜಮಾಡಿಗೆ ವರ್ಗಾಯಿಸುವುದರ ಸಮಸ್ಯೆ ನಿಭಾಯಿಸುವ ಬಗ್ಗೆ ಕೇಂದ್ರದ ಹಂತದಲ್ಲಿ ಮಾತುಕತೆ ನಡೆಸಿ ಆ ಹೊರೆಯನ್ನು ಹೆಜಮಾಡಿಗೆ ಮಾತ್ರ ಹರಿಸದೆ ಬೇರೆ ಯಾವು ರೀತಿ ರಿಯಾಯಿತಿ ನೀಡಬಹುದು ಎಂಬ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ಮಾಡಬೇಕು. ಅಲ್ಲಿಯ ತನಕ ಸಮಸ್ಯೆ ಪರಿಹಾರ ಆಗುವವರೆಗೆ ಹೆಜಮಾಡಿಯಲ್ಲಿ ಹೊಸ ಸುಂಕವನ್ನು ಸಂಗ್ರಹ ಮಾಡಬಾರದು ಎಂದು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago