Featured

ಹೆಜಮಾಡಿ ಟೋಲ್ – ಉಡುಪಿ ಜಿಲ್ಲೆಯ ಎಲ್ಲಾ ವಾಹನಗಳಿಗೆ ಉಚಿತ ಪ್ರವೇಶಕ್ಕೆ ಪ್ರಸ್ತಾಪ : ಸಚಿವ ವಿ. ಸುನೀಲ್ ಕುಮಾರ್ – Vishwanews24

ಉಡುಪಿ ಜಿಲ್ಲೆಯ ಎಲ್ಲಾ ವಾಹನಗಳಿಗೆ ಉಚಿತ ಪ್ರವೇಶ ಅದಕ್ಕಾಗಿ ಪ್ರತ್ಯೇಕ ಮಾರ್ಗಕ್ಕೆ ಪ್ರಸ್ತಾಪ

ಸಮಸ್ಯೆ ಪರಿಹಾರ ಆಗುವವರೆಗೆ ಹೆಜಮಾಡಿಯಲ್ಲಿ ಹೊಸ ಸುಂಕವನ್ನು ಸಂಗ್ರಹ ಮಾಡಬಾರದು ಎಂದು ನಿರ್ಧಾರ

ಉಡುಪಿ: ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿಯಲ್ಲಿ ಸಂಗ್ರಹಿಸಲು ನೀಡಿರುವ ಆದೇಶದ ಬಗ್ಗೆ ಇಂದು ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ನೇತೃತ್ವದಲ್ಲಿ ಉಡುಪಿ ತಾಲೂಕು ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿಗೆ ವರ್ಗಾಯಿಸಿದೂದರ ಸಾದಕ ಭಾದಕಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಅವರು ಆನ್ಲೈನ್ ಮುಲಕ ಭಾಗವಹಿಸಿದರು. ಹಾಗೂ ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಉಪಸ್ಥಿತರಿದ್ದರು.

ಸಭೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅವರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಂದಾಗಿ ಅವೈಜ್ಞಾನಿಕವಾದ ವ್ಯವಸ್ಥೆ ಜಾರಿ ಆಗಿದೆ. ಈ ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದೇವೆ ಎಂದರು.

ಹಾಗೂ ಹೆಜಮಾಡಿಯಲ್ಲಿ ಹೆಚ್ಚುವರಿ ಸುಂಕ ಪಡೆಯಬಾರದು ಮತ್ತು ಕೆ.20 ನೋಂದಣಿಯ ಉಡುಪಿ ಜಿಲ್ಲೆಯ ಎಲ್ಲಾ ವಾಹನಗಳಿಗೆ ಉಚಿತ ಪ್ರವೇಶದ ರಿಯಾಯ್ತಿ ನೀಡಬೇಕು. ಅದಕ್ಕಾಗಿ ಜಿಲ್ಲೆಯ ವಾಹನಗಳಿಗೆ ಪ್ರತ್ಯೇಕ ಮಾರ್ಗ ನೀಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಎರಡು ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು

ಹೆಜಮಾಡಿಯಲ್ಲಿ ಹೆಚ್ಚುವರಿ ಸುಂಕ ಸಂಗ್ರಹ ಮಾಡದೆ ಈ ಹಿಂದೆ ಹೆಜಮಾಡಿಯಲ್ಲಿ ಸಂಗ್ರಹವಾಗುತ್ತಿದ್ದ ಸುಂಕವನ್ನೇ ಪಡೆಯಬೇಕು
ಮತ್ತು ಸುರತ್ಕಲ್ ಸುಂಕವನ್ನು ಹೆಜಮಾಡಿಗೆ ವರ್ಗಾಯಿಸುವುದರ ಸಮಸ್ಯೆ ನಿಭಾಯಿಸುವ ಬಗ್ಗೆ ಕೇಂದ್ರದ ಹಂತದಲ್ಲಿ ಮಾತುಕತೆ ನಡೆಸಿ ಆ ಹೊರೆಯನ್ನು ಹೆಜಮಾಡಿಗೆ ಮಾತ್ರ ಹರಿಸದೆ ಬೇರೆ ಯಾವು ರೀತಿ ರಿಯಾಯಿತಿ ನೀಡಬಹುದು ಎಂಬ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ಮಾಡಬೇಕು. ಅಲ್ಲಿಯ ತನಕ ಸಮಸ್ಯೆ ಪರಿಹಾರ ಆಗುವವರೆಗೆ ಹೆಜಮಾಡಿಯಲ್ಲಿ ಹೊಸ ಸುಂಕವನ್ನು ಸಂಗ್ರಹ ಮಾಡಬಾರದು ಎಂದು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago