ಹೆಜಮಾಡಿ : ಪಡುಬಿದ್ರಿ ಸಮೀಪದ ಹೆಜಮಾಡಿ ಟೋಲ್ ಗೇಟಿನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯತಿ ನೀಡುವಂತೆ ಹೆಜಮಾಡಿ ಗ್ರಾಮ ಪಂಚಾಯತ್ ವತಿಯಿಂದ ನವಯುಗ ಕಂಪನಿಗೆ ಮನವಿ ಸಲ್ಲಿಸಲಾಯಿತು.
ಹೆಜಮಾಡಿ ಗ್ರಾಮದಿಂದ ಕೇವಲ ಅರ್ಧ ಕಿಲೋ ಮೀಟರ್ ದೂರದಲ್ಲಿ ಮೂಲ್ಕಿ ಗ್ರಾಮ ಇದೆ. ಮೂಲ್ಕಿಯಲ್ಲಿ ವ್ಯಾಪಾರ ವಹಿವಾಟು ಮಾಡುವವರಿಗೆ ಟೋಲ್ ಗೇಟಿನಿಂದ ಅತ್ಯಂತ ತೊಂದರೆ ಉಂಟಾಗುತ್ತಿದೆ. ಹೆಜಮಾಡಿ ಪರಿಸರದ ವಾಹನಗಳಿಗೆ ಟೋಲ್ ಗೇಟಿನ ಸಿಬ್ಬಂದಿ ದಿನನಿತ್ಯ ಕಿರುಕುಳ ನೀಡುತ್ತಿದ್ದಾರೆ.
ಇದನ್ನೂ ಓದಿ :ಉಡುಪಿ: ಅನರ್ಹರ ಪಡಿತರ ಚೀಟಿ ಹಿಂದಿರುಗಿಸಲು ಏ. 15 ಕೊನೆಯ ದಿನ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಶಾಲಾ ಬಸ್ಸ್ಗಳಿಗೂ ಟೋಲ್ ವಿನಾಯಿತಿ ಇಲ್ಲದ್ದರಿಂದ ಪಾಲಕರು ಹೆಚ್ಚಿನ ಹಣವನ್ನು ಶಾಲೆಗೆ ಭರಿಸಬೇಕಾಗಿದೆ. ಟೋಲ್ನಲ್ಲಿ ವಿನಾಯತಿ ನೀಡುವಂತೆ ಈಗಾಗಲೇ ಟೋಲ್ ಗೇಟಿನ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಅವರು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಹೆಜ್ಮಾಡಿ ಮಾಧ್ಯಮಕ್ಕೆ ತಿಳಿಸಿದ್ದಾರೆ ಹೇಳಿಕೊಂಡಿದ್ದಾರೆ.
ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪವಿತ್ರ ಗಿರೀಶ್, ಹೆಜಮಾಡಿ ಗ್ರಾಮ ಪಂಚಾಯತ್ನ ಎಲ್ಲಾ ಸದಸ್ಯರು ಟೋಲ್ ಗೇಟಿಗೆ ತೆರಳಿ ಅಲ್ಲಿಯ ಅಧಿಕಾರಿ ಶಿವಪ್ರ್ರಸಾದ್ ರೈಯವರಿಗೆ ಮನವಿ ಸಲ್ಲಿಸಿದರು. ಶಿವಪ್ರ್ರಸಾದ್ ರೈಯವರು ಮನವಿಗೆ ಸ್ಪಂಧಿಸಿ, ಮೇಲಾಧಿಕಾರಿಯವರಿಗೆ ಈ ಬಗ್ಗೆ ತಿಳಿಹೇಳಿ ಶೀಘ್ರವಾಗಿ ಸ್ಪಂಧಿಸುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ :ಉಡುಪಿ :ಕನ್ನಡ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…