ಹೆಜಮಾಡಿ : ಪಡುಬಿದ್ರಿ ಸಮೀಪದ ಹೆಜಮಾಡಿ ಟೋಲ್ ಗೇಟಿನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯತಿ ನೀಡುವಂತೆ ಹೆಜಮಾಡಿ ಗ್ರಾಮ ಪಂಚಾಯತ್ ವತಿಯಿಂದ ನವಯುಗ ಕಂಪನಿಗೆ ಮನವಿ ಸಲ್ಲಿಸಲಾಯಿತು.
ಹೆಜಮಾಡಿ ಗ್ರಾಮದಿಂದ ಕೇವಲ ಅರ್ಧ ಕಿಲೋ ಮೀಟರ್ ದೂರದಲ್ಲಿ ಮೂಲ್ಕಿ ಗ್ರಾಮ ಇದೆ. ಮೂಲ್ಕಿಯಲ್ಲಿ ವ್ಯಾಪಾರ ವಹಿವಾಟು ಮಾಡುವವರಿಗೆ ಟೋಲ್ ಗೇಟಿನಿಂದ ಅತ್ಯಂತ ತೊಂದರೆ ಉಂಟಾಗುತ್ತಿದೆ. ಹೆಜಮಾಡಿ ಪರಿಸರದ ವಾಹನಗಳಿಗೆ ಟೋಲ್ ಗೇಟಿನ ಸಿಬ್ಬಂದಿ ದಿನನಿತ್ಯ ಕಿರುಕುಳ ನೀಡುತ್ತಿದ್ದಾರೆ.
ಇದನ್ನೂ ಓದಿ :ಉಡುಪಿ: ಅನರ್ಹರ ಪಡಿತರ ಚೀಟಿ ಹಿಂದಿರುಗಿಸಲು ಏ. 15 ಕೊನೆಯ ದಿನ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಶಾಲಾ ಬಸ್ಸ್ಗಳಿಗೂ ಟೋಲ್ ವಿನಾಯಿತಿ ಇಲ್ಲದ್ದರಿಂದ ಪಾಲಕರು ಹೆಚ್ಚಿನ ಹಣವನ್ನು ಶಾಲೆಗೆ ಭರಿಸಬೇಕಾಗಿದೆ. ಟೋಲ್ನಲ್ಲಿ ವಿನಾಯತಿ ನೀಡುವಂತೆ ಈಗಾಗಲೇ ಟೋಲ್ ಗೇಟಿನ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಅವರು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಹೆಜ್ಮಾಡಿ ಮಾಧ್ಯಮಕ್ಕೆ ತಿಳಿಸಿದ್ದಾರೆ ಹೇಳಿಕೊಂಡಿದ್ದಾರೆ.
ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪವಿತ್ರ ಗಿರೀಶ್, ಹೆಜಮಾಡಿ ಗ್ರಾಮ ಪಂಚಾಯತ್ನ ಎಲ್ಲಾ ಸದಸ್ಯರು ಟೋಲ್ ಗೇಟಿಗೆ ತೆರಳಿ ಅಲ್ಲಿಯ ಅಧಿಕಾರಿ ಶಿವಪ್ರ್ರಸಾದ್ ರೈಯವರಿಗೆ ಮನವಿ ಸಲ್ಲಿಸಿದರು. ಶಿವಪ್ರ್ರಸಾದ್ ರೈಯವರು ಮನವಿಗೆ ಸ್ಪಂಧಿಸಿ, ಮೇಲಾಧಿಕಾರಿಯವರಿಗೆ ಈ ಬಗ್ಗೆ ತಿಳಿಹೇಳಿ ಶೀಘ್ರವಾಗಿ ಸ್ಪಂಧಿಸುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ :ಉಡುಪಿ :ಕನ್ನಡ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…